• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

      Voiceofjanata.in

      May 12, 2025
      0
      ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ
      0
      SHARES
      443
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಡಳಿತದಿಂದ ಭಗವಾನ್ ಬುದ್ಧ ಜಯಂತಿ ಆಚರಣೆ

      ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

      ವಿಜಯಪುರ ಮೇ : ಅಸಮಾನತೆ, ಕಂದಾಚಾರಗಳಂತಹ ಆಚರಣೆಗಳಿಂದ ನರಳುತ್ತಿದ್ದ ಜಗತ್ತಿಗೆ ಜ್ಞಾನದ ಬೆಳಕಾಗಿ ಶಾಂತಿ, ಸಮಾನತೆಯ ದಾರಿ ತೋರಿದವರು ಭಗವಾನ್ ಬುದ್ಧರು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಅವರು ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಎದುರುಗಡೆ ಇರುವ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಬುದ್ಧ-ಬಸವ-ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಅನುಸರಣೆ ಮಾಡಬೇಕು. ಜಗತ್ತಿಗೆ ಶಾಂತಿ ಬೋಧಿಸಿದ ಬುದ್ಧನ ಆದರ್ಶ-ವಿಚಾರಗಳ ಬಗ್ಗೆ ಅರಿವು ಹೊಂದಬೇಕು. ಬುದ್ಧ-ಬಸವ-ಅಂಬೇಡ್ಕರ್ ಅವರ ಆದರ್ಶಗಳು ಇಡೀ ಜಗತ್ತಿಗೆ ಸಾರ್ವಕಾಲಿಕವಾಗಿವೆ. ಆಗಾಗ ಅವರ ಆದರ್ಶ, ವಿಚಾರಗಳು, ಚಿಂತನೆಗಳನ್ನು ತಿಳಿದುಕೊಳ್ಳುವ ಅಗತ್ಯತೆ ಇದೆ. ಶಾಲಾ ಕಾಲೇಜಿನ ಮಕ್ಕಳಿಗೆ ಬುದ್ಧರ ತತ್ವಗಳನ್ನು, ಚಿಂತನೆಗಳನ್ನು ತಿಳಿಸಬೇಕು. ಬುದ್ಧ ನಮ್ಮೆಲ್ಲರ ಮನೆಯ ಮನದ ಬೆಳಕು, ಜಗತ್ತಿನ ಭರವಸೆಯ ಬೆಳಕು, ಇಂತಹ ಮಹಾನಗರ ಆದರ್ಶ-ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

      ಭಗವಾನ ಬುದ್ಧ ನೆಮ್ಮದಿ ಜೀವನಕ್ಕೆ ಮೂಲಗಳಾದ ಸತ್ಯ ಮತ್ತು ಅಹಿಂಸೆಗಳಂತಹ ಎಂಟು ಸನ್ಮಾರ್ಗಗಳನ್ನು ಪ್ರಪಂಚಕ್ಕೆ ಸಾರಿದ್ದಾರೆ. ಅವರ ಅಷ್ಟಾಂಗ ಮಾರ್ಗಗಳನ್ನು ಅನುಸರಿಸುವ ಅಗತ್ಯತೆ ಇಂದಿನ ಪೀಳಿಗೆಗಳಿದೆ ಎಂದು ಅವರು ಹೇಳಿದರು.
      ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಬೌದ್ಧ ತತ್ವಜ್ಞಾನಿ ಸಂಶೋಧಕರಾದ ಅನ್ನಪೂರ್ಣ ಬೆಳ್ಳೆನವರ ಅವರು ಬುದ್ಧನ ಜೀವನ ಚರಿತ್ರೆಯ ಕುರಿತು ವಿಸ್ತಾರವಾಗಿ ಮಾಹಿತಿ ನೀಡಿ, ಅನೇಕ ಶಾಂತಿ ತತ್ವಗಳನ್ನು ಬುದ್ಧ ನೀಡಿದ್ದಾರೆ. ಅವರು ನೀಡಿದ ಪಂಚಶೀಲ ತತ್ವಗಳನ್ನು ಪಾಲಿಸುವ ಮೂಲಕ ಜೀವನ ಸಾರ್ಥಕತೆ ಹೊಂದಬೇಕು ಎಂದು ಅವರು ಹೇಳಿದರು.
      ಉಪನ್ಯಾಸ ನೀಡಿದ ಹಿರಿಯ ನ್ಯಾಯವಾದಿಗಳಾದ ಕೆ.ಎಫ್.ಅಂಕಲಗಿ ಮಾತನಾಡಿ, ಎಲ್ಲ ವೈಭೋಗವನ್ನು ತ್ಯಜಿಸಿ ಜ್ಞಾನಮಾರ್ಗವನ್ನು ತೋರಿಸಿದ ಭಗವಾನ್ ಬುದ್ಧ, ಬಾಲ್ಯದಲ್ಲಿಯೇ ತಮ್ಮ ಅರಮನೆಯ ಸೇವಕರನ್ನು ಬಂಧುಗಳಾಗಿ ಕಾಣುವ ಗುಣ ಹೊಂದುವ ಮೂಲಕ ಜನಾನುರಾಗಿಯಾಗಿದ್ದರು. ಜನರು ಬುದ್ಧನನ್ನು ಪ್ರೀತಿಸುತ್ತಿದ್ದರು. ಇಂತಹ ಗುಣಗಳನ್ನು ಹೊಂದಿದ ಬುದ್ಧನ ತತ್ವಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪಾಲನೆಗೆ ಮುಂದಾಗಬೇಕು ಎಂದು ಅವರು ಹೇಳಿದರು.
      ಕಾರ್ಯಕ್ರಮಕ್ಕೂ ಮುನ್ನ ನಗರದ ಬುದ್ಧ ವಿಹಾರದಿಂದ ಆರಂಭಗೊಂಡ ಭಗವಾನ್ ಬುದ್ಧ ಭಾವಚಿತ್ರ ಮೆರವಣಿಗೆಗೆ ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಿಂಗಪ್ಪ ಗೋಠೆ ಚಾಲನೆ ನೀಡಿದರು. ಭಾವಚಿತ್ರ ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ಸಾಗಿತು.

      ಎಚ್.ಎ.ಮಮದಾಪುರ ಕಾರ್ಯಕ್ರಮ ನಿರೂಪಿಸಿದರು. ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಶಂಕರ್ ಮಾರಿಹಾಳ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ನಾರಾಯಣಕರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಬುದ್ಧ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ರಾಜಶೇಖರ ಎಡಹಳ್ಳಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #indi / vijayapur#Light of Knowledge-Shanti Equality#Public News#State News#Today News#Voice Of Janata#ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.