ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ
Voiceofjanata.in :DesK NEWS :ದಾವಣಗೆರೆಯ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿಂದು ಜರುಗಿದ ‘ಮಹರ್ಷಿ ವಾಲ್ಮೀಕಿ ಜಾತ್ರೆ – 2026’ರಲ್ಲಿ ಪಾಲ್ಗೊಂಡು, ದಿವ್ಯ ಸಾನ್ನಿಧ್ಯ ವಹಿಸಿದ ಪರಮಪೂಜ್ಯ ಶ್ರೀ ಶ್ರೀ ಡಾ. ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದುಕೊಳ್ಳಲಾಯಿತು.
ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್ ಅವರು, ಶಾಸಕರಾದ ಶ್ರೀ ಬಸವನಗೌಡ ದದ್ದಲ್ ಅವರು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ನಾಗಲಕ್ಷ್ಮಿ ಚೌಧರಿಯವರು, ಮಹರ್ಷಿ ವಾಲ್ಮೀಕಿ ಗುರುಪೀಠದ ಆಡಳಿತಾಧಿಕಾರಿಗಳಾದ ಶ್ರೀ ಟಿ. ಓಬಳಪ್ಪ ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



















