• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

      Voiceofjanata.in

      May 20, 2025
      0
      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

       

       

      ವಿಜಯಪುರ : ಜಿಲ್ಲೆಯ ೧೩ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ದುಡಿಯೋಣ ಬಾ ಅಭಿಯಾನದಡಿ ಸತತ ಉದ್ಯೋಗ ಕಲ್ಪಿಸಲಾಗುತ್ತಿದೆ. ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ೨,೯೪,೩೨೩ ಮಾನವ ದಿನಗಳನ್ನು ಸೃಜನೆ ಮಾಡಿ ಅಂತರ್ಜಲ ಅಭಿವೃದ್ಧಿಗಾಗಿ ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಗಳ ಹೂಳೆತ್ತುವ ಹಾಗೂ ಅರಣ್ಯೀಕರಣಕ್ಕೆ ಮುಂಗಡ ಗುಂಡಿಗಳು, ಕೃಷಿಹೊಂಡ, ಬದು ನಿರ್ಮಾಣ, ನಾಲಾ-ಹಳ್ಳಗಳಲ್ಲಿ ಮಳೆ ನೀರು ಶೇಖರಣೆ ಆಗಿದೆ. ಮುಂಬರುವ ದಿನಗಳಲ್ಲಿ ವಿವಿಧೆಡೆ ಬಾವಿ ಹಾಗೂ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಯಾಗಿ ಆ ಭಾಗದ ರೈತರ ಮೊಗದಲ್ಲಿ ಸಂತಸ ತರಿಸಿದೆ.
      ಕಳೆದ ದಿನಗಳಲ್ಲಿ ಭೀಕರ ಬರ ನೆನಪಿಸುವಂಥ ದಿನಗಳನ್ನು ಕಂಡಿದ್ದ ವಿಜಯಪುರ ಜಿಲ್ಲೆಯಲ್ಲಿ ವಾಡಿಕೆ ಮಳೆ ಪ್ರಮಾಣ ಕಡಿಮೆ ಇದ್ದ ಹಿನ್ನೆಲೆಯಲ್ಲಿ ಕೆರೆಗಳು, ಬಾವಿಗಳು, ಬೋರ್ವೆಲ್ಗಳು ನೀರಿನ ವರತೆ ಕಡಿಮೆ ಇತ್ತು ಸ್ವಾಭಾವಿಕ ಸಂಪನ್ಮೂಲಗಳಲ್ಲಿ ಒಂದಾದ ನೀರು ಮನುಷ್ಯ ಸೇರಿದಂತೆ ಸಕಲ ಜೀವರಾಶಿಗಳಿಗೂ ಅತ್ಯವಶ್ಯಕ ಜಲವೇ ಜೀವನ ಎಂಬಂತೆ ನೀರಿನ ಬಳಕೆ ಮತ್ತು ಉಳಿತಾಯದಲ್ಲಿ ಬಹುದೊಡ್ಡ ಜವಾಬ್ದಾರಿಯನ್ನು ನಿಭಾಯಿಸಬೇಕಾಗಿದೆ. ಮಳೆ ಆಶ್ರೀತ ಕೃಷಿ ಚಟುವಟಿಕೆಗೆ ನೀರು ಸಂಗ್ರಹಣೆಯು ಪ್ರಮುಖ ಪಾತ್ರವಹಿಸುತ್ತದೆ. ಮಳೆಗಾಲದ ಸಂದರ್ಭದಲ್ಲಿ ಮಳೆ ನೀರು ಹಿಡಿದಿಟ್ಟುಕೊಳ್ಳುವುದು ಅಗತ್ಯವಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆರೆಗಳ ಹೂಳೆತ್ತುವ ಹಾಗೂ ಅರಣ್ಯೀಕರಣಕ್ಕೆ ಮುಂಗಡ ಗುಂಡಿಗಳು, ಕೃಷಿಹೊಂಡ, ಬದು ನಿರ್ಮಾಣ, ನಾಲಾ-ಹಳ್ಳಗಳ ಅಭಿವೃದ್ಧಿಪಡಿಸುವ ಮಹತ್ತರ ಕಾರ್ಯ ಕೈಗೊಳ್ಳಲಾಗಿದೆ. ಈ ಕಾಮಗಾರಿಗಳನ್ನು ಅಭಿವೃದ್ಧಿಪಡಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸುವ ಸ್ವಾಗತಾರ್ಹ ಕೆಲಸ ಮಾಡಲಾಗಿದೆ.

      ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಉದ್ಯೋಗ ಖಾತರಿ ಯೋಜನೆ ಕೈ ಹಿಡಿದಿರುವುದು ಒಂದೆಡೆಯಾದರೆ, ಹೂಳೆತ್ತಿದ ಕೆರೆಯಲ್ಲಿ ನೀರು ನಿಂತಿರುವುದು ಸಾರ್ಥಕತೆ ಮೂಡಿಸಿದೆ. ಹೂಳು ತುಂಬಿ ಹೆಚ್ಚು ನೀರು ನಿಲ್ಲದೇ ಇರುವ ಕೆರೆಗಳನ್ನು ಆಯ್ಕೆ ಮಾಡಿಕೊಂಡು ಕೂಲಿಕಾರ್ಮಿಕರಿಗೆ ಕೆಲಸ ನೀಡಿ, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕೆರೆಗಳಲ್ಲಿ ಮಳೆನೀರು ಸಂಗ್ರಹವಾಗುವಂತೆ ಮಾಡಲಾಗಿದೆ.

      ಕೆರೆಗಳು ಹಾಗೂ ಜಲಮೂಲಗಳು ಒಣಗಿದ್ದರಿಂದ ಸುತ್ತಮುತ್ತಲಿನ ದ್ರಾಕ್ಷಿ ಸೇರಿ ಇತರೆ ತೋಟಗಾರಿಕೆ ಬೆಳೆಗಳಿಗೆ ನೀರಿಲ್ಲದೇ ಒಣಗುತ್ತಿದ್ದವು. ಆದರೆ ಈಗ ಕೆರೆಗಳು ಭರ್ತಿಯಾಗಿದ್ದರಿಂದ ಸುತ್ತಮುತ್ತಲಿನ ಬಾವಿಗಳು, ಕೊಳವೆ ಬಾವಿಗಳು ಮರುಪೂರಣ ಆಗಿದ್ದು, ರೈತರ ಆತಂಕ ದೂರವಾಗಿದೆ. ಕೆರೆಗಳಲ್ಲಿ ನೀರು ನಿಂತಿದೆ. ಮಹಾತ್ಮ ಗಾಂಧಿ ನರೇಗಾ ಹೂಳೆತ್ತಿದ್ದರಿಂದ ಆಳ ಹೆಚ್ಚಾಗಿದ್ದು, ನೀರು ಸಂಗ್ರಹಣೆ ಪ್ರಮಾಣವೂ ಹೆಚ್ಚಾಗಿ ಕೆರೆಯ ಸುತ್ತಮುತ್ತಲು ಬತ್ತಿ ಹೋಗಿದ್ದ ಬೋರ್ವೆಲ್, ಬಾವಿಗಳಿಗೆ ನೀರು ಹೆಚ್ಚುವ ಸಾಧ್ಯತೆ ಇದೆ. ಇದರಿಂದ ತೋಟಗಾರಿಕೆ ರೈತರಿಗೆ ನೀರಿನ ಕೊರತೆ ನೀಗುತ್ತದೆ. ಗಿಡ ಮರಗಳಿಗೆ ನೀರು ಸಿಕ್ಕು, ನೀರಿಲ್ಲದೇ ಒಣಗುತ್ತಿದ್ದ ಮರಗಳಿಗೂ ಸಹ ನೀರು ಲಭಿಸಿ ಜೀವ ಬಂದಂತಾಗಿದೆ ಹಾಗೂ ಜನಜಾನುವಾರುಗಳಿಗೆ ಜೀವ ಜಲ ಸಿಕ್ಕಿದೆ. ದುಡಿಯುವ ಕೈಗಳಿಗೆ ಕೆಲಸವೂ ಲಭಿಸಿದೆ.

      ಫಲಶೃತಿ: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆರೆಗಳ ಹೂಳೆತ್ತುವ ಹಾಗೂ ಅರಣ್ಯೀಕರಣಕ್ಕೆ ಮುಂಗಡ ಗುಂಡಿಗಳು, ಕೃಷಿಹೊಂಡ, ಬದು ನಿರ್ಮಾಣ, ನಾಲಾ/ಹಳ್ಳಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದ್ದರಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಜಿಲ್ಲೆಯಲ್ಲಿ ಇದೀಗ ಆರಂಭವಾಗಿರುವ ವರ್ಷಧಾರೆಯಿಂದಾಗಿ ಕೆರೆಗಳು ಬಹುತೇಕ ಮೈದುಂಬಿ ಕಂಗೊಳಿಸುತ್ತಿವೆ. ಗ್ರಾಮಗಳ ಜನ-ಜಾನುವಾರುಗಳಿಗೆ ಆಸರೆಯಾಗಿವೆ. ಸುತ್ತ-ಮುತ್ತಲಿನ ಜಮೀನುಗಳಿಗೆ ಮತ್ತು ಬೋರ್ವೆಲ್ಗಳಿಗೆ ಅಂತರ್ಜಲ ಮಟ್ಟ ಹೆಚ್ಚಾಗಲು ಆರಂಭಿಕ ಹೆಜ್ಜೆ ಇಟ್ಟಿದೆ. ಕೆರೆಯ ಅಂಚಿನ ಪ್ರದೇಶದ ರೈತರಿಗೆ ಸಹಕಾರಿಯಾಗಿದೆ. ಮೂಕ ಪ್ರಾಣಿ, ಪಕ್ಷಿ ಹಾಗೂ ಜಾನುವಾರುಗಳಿಗೆ ನೀರಿನ ದಾಹ ನೀಗಿಸಿದಂತಾಗಿದೆ, ಸಾರ್ವಜನಿಕರು ಕೃಷಿ ಚಟುವಟಿಕೆಗಳಿಗೆ ಕೆರೆಯ ನೀರನ್ನು ಬಳಸಿಕೊಂಡು ಉತ್ತಮ ಇಳುವರಿ ಮತ್ತು ಅಧಿಕ ಆದಾಯ ಪಡೆಯಲು ಸಹಾಯಕವಾಗುತ್ತದೆ.

      ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿರಿಶ್ಯಾಳ ಕೆರೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳು ತೆಗೆಯಲಾಗಿದ್ದು, ತಗ್ಗುಗಳಲ್ಲಿ ಮಳೆ ನೀರು ಸಂಗ್ರಹವಾಗಿದೆ. ಕೆರೆ ಅಂಗಳದಲ್ಲಿ ಸುಮಾರು ೩ಅಡಿ ಉದ್ದ, ೩ ಅಡಿ ಅಗಲ, .೬ ಅಡಿ ಆಳದ ಒಟ್ಟು ೧೭೧ ತಗ್ಗುಗಳನ್ನು ನಿರ್ಮಿಸಲಾಗಿದೆ. ಪ್ರತಿ ತಗ್ಗು ೫೪೦೦ ಲೀಟರ್ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುತ್ತದೆ. ಒಟ್ಟು ೧೭೧ ತಗ್ಗುಗಳಲ್ಲಿ ೯,೨೩,೪೦೦ ಲೀಟರ್ ನೀರು ಸಂಗ್ರಹವಾಗಿದೆ. ಈ ಕೆರೆ ಸುತ್ತಲೂ ಹೆಬ್ಬಾಳ ಗ್ರಾಮದ ವ್ಯಾಪ್ತಿಗೆ ಅಂದಾಜು ೧೦೦ ಎಕರೆ ಜಮೀನು ಇದ್ದು, ೧೬ ಬೊರ್ ವೆಲ್ ಹಾಗೂ ೨೫ ಬಾವಿಗಳಿವೆ. ಈ ಭಾಗದಲ್ಲಿ ಅಂತರ್ಜಲ ವೃದ್ಧಿಯಾಗಿದೆ. ಈ ಕಾಮಗಾರಿಗೆ ರೂ.೩೮೧೩೯ ಲಕ್ಷ ಕೂಲಿ ಹಣ ಹಾಗೂ ಸಾಮಗ್ರಿ ವೆಚ್ಚವಾಗಿ ೧೦೮೩೫೬ ಸೇರಿ ಒಟ್ಟು ೪೯೭೪೯೫ ವೆಚ್ಚ ಮಾಡಲಾಗಿದೆ. ಇದಕ್ಕಾಗಿ ೧೦೫ ಜನ ಕೂಲಿಕಾರರು ಕೆಲಸ ಮಾಡಿ ಒಟ್ಟು೧೧೧೫ ಮಾನವ ದಿನಗಳನ್ನು ಸೃಜನೆ ಮಾಡಿದ್ದಾರೆ.

      ಒಟ್ಟಾರೆಯಾಗಿ ಜಿಲ್ಲೆಯಲ್ಲಿ ನೀರು ಮತ್ತು ಮಣ್ಣು ಸಂರಕ್ಷಣೆ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರ ಜೊತೆಗೆ ನೀರಿನ ಸಂರಕ್ಷಣೆಗೆ ನರೇಗಾ ಯೋಜನೆ ಸಹಕಾರಿಯಾಗಿದೆ. ಯೋಜನೆಯಡಿ ಈ ವರ್ಷ ಹೂಳೆತ್ತಿದ ಕೆರೆಗಳಲ್ಲಿ ಈಗ ಮಳೆ ನೀರು ಸಂಗ್ರಹವಾಗಿದೆ.

       

      ಅಂತರ್ಜಲ ಹೆಚ್ಚಳಕ್ಕೆ ವರ್ಷಧಾರೆಯು ಆರಂಭಿಕ ಹೆಜ್ಜೆ ಇಟ್ಟಿದೆ. ಭೂಮಂಡಲದ ಸಕಲ ಜೀವ-ಸಸ್ಯ ರಾಶಿಗಳಿಗೆ ನೀರೇ ಮೂಲಾಧಾರ. ಅನಾದಿ ಕಾಲದಿಂದ ನಾಗರಿಕತೆಗಳು ಬೆಳೆದಂತೆ ನೀರಿನ ಜೊತೆ ಮಾನವನ ನಿಕಟ ಸಂಬಂಧ ಬೆಳೆಯುತ್ತಲೇ ಬಂದಿದೆ. ಮಳೆ ಆಶ್ರಯದ ಕೃಷಿಗೆ ಮಳೆಯ ವೈಫಲ್ಯತೆ ಕಂಡಾಗ ಕೆರೆ ಕಟ್ಟೆಗಳೆ ಆಶ್ರಯವಾಗಿವೆ ಎಂದು ವಿಜಯಪುರ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Mahatma Gandhi Narega Project has been provided with continuous employment in the summer ..!#Public News#State News#Today News#Voice Of Janata#Voiceofjanata.in#ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      December 3, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.