ಐಎಎಸ್ ಕನಸು ಭಗ್ನ: ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು..
ಮಂಡ್ಯ: ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆಗೊಂಡು ಕೊಳ್ಳೇಗಾಲ ಮೂಲದ ಬ್ಯಾಂಕ್ ಮ್ಯಾನೇಜರ್ ಮಂಡ್ಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಾವೇರಿ ಗ್ರಾಮೀಣ ಬ್ಯಾಂಕ್ ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಡ್ಯದ ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ ಐಎಎಸ್ ಕನಸು ಮತ್ತು ಜೀವನದ ವೈಫಲ್ಯ ಸಾವಿಗೆ ಕಾರಣ ಎಂದು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.
ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿರುವ ಶೃತಿ ಐಎಎಸ್ ಮಾಡಬೇಕೆಂಬ ಕನಸು ನನಸಾಗಲಿಲ್ಲ, ಜೊತೆಗೆ ಜೀವನದಲ್ಲಿಯೂ ನಾನು ವೈಫಲ್ಯವನ್ನೂ ಕಂಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ : ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ.