ಗುಂಡಿಗಳ ಆಳ ಅಗಲ ಗೊತ್ತಿಲ್ಲದೆ ವಾಹನ ಸವಾರರು ಬಿದ್ದು ಕೈಕಾಲುಗಳನ್ನು ಮುರಿದುಕೊಳ್ಳುತ್ತಿದ್ದಾರೆ : ಕೆ ಆರ್ ಎಸ್
ವಿಜಯಪುರ : ನಗರದಲ್ಲಿ ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದಾಗಿ ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಬಿದ್ದಿರುವ ಗುಂಡಿಗಳನ್ನು ಮಳೆಗಾಲದ ಮುನ್ಸೂಚನೆಯನ್ನು ಅರಿತು ಮುಚ್ಚುವಂತೆ ಕಾರ್ಯವನ್ನು ಮಹಾನಗರ ಪಾಲಿಕೆ ಮಾಡಬಹುದಾಗಿತ್ತು. ಆದರೆ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದಾಗಿ ನಗರದಲ್ಲಿ ರಸ್ತೆ ಅಪಘಾತಗಳು ಸಂಖ್ಯೆ ಹೆಚ್ಚಾಗುತ್ತಿದೆ. ಈಗ ಮಳೆಗಾಲದ ಸಮಯವಾಗಿದ್ದರಿಂದಾಗಿ ಗುಂಡಿಗಳು ನೀರಿನಿಂದ ತುಂಬಿಕೊಳ್ಳುತ್ತವೆ . ಗುಂಡಿಗಳ ಆಳ ಅಗಲ ಗೊತ್ತಿಲ್ಲದೆ ವಾಹನ ಸವಾರರು ಬಿದ್ದು ಕೈಕಾಲುಗಳನ್ನು ಮುರಿದುಕೊಳ್ಳುತ್ತಿದ್ದಾರೆ ಎಂದು ಕೆಆರ್ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಆಗ್ರಹಪಡಿಸಿದರು.
ಮಹಾನಗರ ಪಾಲಿಕೆಯ ಅಧಿಕಾರಿಗಳು ಗುಂಡಿ ಮುಚ್ಚುವುದರ ಮೂಲಕ ನಗರದ ನಾಗರಿಕರ ಜೀವವನ್ನು ಉಳಿಸಬೇಕಾಗಿದೆ ಎಂದು ಕೆ.ಆರ್.ಎಸ್ ಪಕ್ಷವು ಸೈನಿಕರು ಗುಂಡಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವುದರ ಮೂಲಕ ಪ್ರತಿಭಟಿಸಿದರು. ಇದೆ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ವಿಕ್ರಮ ವಾಗಮೊರೆ, ದುರ್ಗಪ್ಪ ಬೂದಿಹಾಳ, ಸೀನು ಹಿಪ್ಪರಗಿ ಉಪಸ್ಥಿತರಿದ್ದರು.