ಅಲೆಮಾರಿ ಹಾಗೂ ಅರೆ ಅಲೆಮಾರಿ ನಿಗಮದ ವತಿಯಿಂದ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಹಸುಗಳ ವಿತರಿಸಿದ ಶಾಸಕ ಎಂ.ಆರ್ ಮಂಜುನಾಥ್
ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ
ಹನೂರು :ತಾಲೂಕಿನ ಲೋಕೋಪಯೋಗಿ ಅತಿಥಿ ಗೃಹದ ಅವರಣದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡಗಳ ಅಲೆಮಾರಿ ಹಾಗೂ ಅಲೆಮಾರಿ ಸೂಕ್ರ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹಸುಗಳ ವಿತರಿಸಿದರು.
ನಂತರ ಮಾತನಾಡಿದ ಅವರು ಗಿರಿಜನರ ಅಭಿವೃದ್ಧಿಗೆ ಸರ್ಕಾರವು ಹಲವಾರು ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿ ಆರು ಜನರಿಗೆ 12 ಹಸುಗಳನ್ನು ಈ ಸಮಯದಲ್ಲಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್ ಬೇಗಂ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ,ಸಹಾಯಕ ನಿರ್ದೇಶಕ ಪಶುಸಂಗೋಪನೆ ಇಲಾಖೆ ಸಿದ್ದರಾಜು,ಸಮಾಜ ಕಲ್ಯಾಣಾ ಇಲಾಖೆ ಅಲೆಮಾರಿ ನಿಗಮದ ಅಧಿಕಾರಿ ಈಶ್ವರ್, ಮುಖಂಡರುಗಳಾದ ಉದ್ದನೂರು ಗಿರೀಶ್, ಪ್ರಮೋದ್ ,ವಿಜಯ್ ಕುಮಾರ್, ಇನ್ನು ಮುಂತಾದವರು ಹಾಜರಿದ್ದರು.