ಮುದ್ದೇಬಿಹಾಳ| ಸಿಡಿಲಿಗೆ ಕೂಲಿ ಕಾರ್ಮಿಕ ಬಲಿ..!
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ : ಕೂಲಿ ಕರ್ಮಿಕನಿಗೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಆಲೂರ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಮಹಾರಾಷ್ಟ್ರ ಮೂಲದ ಜತ್ತ್ ತಾಲ್ಲೂಕಿನ ಮಣಿಕನಾಳ ಗ್ರಾಮದ ಶ್ರೀಶೈಲ ರಾಮಲಿಂಗ ಮುಗಳಕೋಡ ಎಂಬುವರು ಬಂದಿದ್ದು, ಇಂದು ಸಂಜೆ ಸಿಡಿಲಿಗೆ ಬಲಿಯಾಗಿದ್ದಾರೆ. ಮೃತರಿಗೆ ಒಂದು ಹೆಣ್ಣು ಮಗು ಇದ್ದು, ಪತ್ನಿ 6 ತಿಂಗಳು ಗರ್ಭಿಣಿ ಇರುವುದಾಗಿ ತಿಳಿದು ಬಂದಿದೆ. ಮುದ್ದೇಬಿಹಾಳ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.