ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ:
ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆಗೈದ ಘಟನೆ ವಿಜಯಪುರ ನಗರದ ಜಾಮೀಯಾ ಮಸೀದಿ ಬಳಿ ನಡೆದಿದೆ.
15 ವರ್ಷದ ಫಾರಿದ್ ಹೊನವಾಡ ಮೃತಪಟ್ಟಿರುವ ದುರ್ದೈವಿಯಾಗಿದ್ದು ರಾಹುಲ್ ಬೆಳ್ಳುಬ್ಬಿ ಹತ್ಯೆಗೈದಿರುವ ಆರೋಪಿಯಾಗಿದ್ದಾನೆ.
ಇನ್ನು ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ವೇಳೆ ರಾಹುಲ್ ಫಾರಿದ್ ಮೇಲೆ ಹಲ್ಲೆಗೈದು ಹತ್ಯೆ ಮಾಡಲಾಗಿದೆ.
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.