ವಿಜಯಪುರ: ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಮೃತ ಡಾಬಾ ಹತ್ತಿರ ನಡೆದಿದೆ. ಮೂಲತಃ ಸೊಲ್ಲಾಪುರ ನಿವಾಸಿಯಾದ ನಿಥಿನ್ ಸಂತೋಷ ಮಾಶಾಳಕರ ಕೊಲೆಯಾಗಿರುವ ದುರ್ದೈವಿ. ಮೃತ ದುರ್ದೈವಿ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಮಾವನ ಮನೆಯಲ್ಲಿ ವಾಸವಾಗಿದ್ದ. ಆದ್ರೆ ನಿನ್ನೆ ತಡರಾತ್ರಿ ಕುಡಿದ ನಶೆಯಲ್ಲಿ ದುಷ್ಕರ್ಮಿಗಳೊಂದಿಗೆ ಮಾತಿಗೆ ಮಾತು ಬೆಳೆದಿದ್ದು, ಕೊಲೆಯಲ್ಲಿ ಜಗಳ ಅಂತ್ಯವಾಗಿದೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.