ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ
ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ.ಎಸ್.ಕಸನಕ್ಕಿ
ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ಕೂಲಿಕಾರರ ಅರೋಗ್ಯ ವೃದ್ಧಿಗೆ ನರೇಗಾ ಯೋಜನೆ ಬದ್ಧವಾಗಿದ್ದು, ಇದಕ್ಕಾಗಿ ಕಾಮಗಾರಿ ಸ್ಥಳದಲ್ಲೆ ಅರೋಗ್ಯ ಉಚಿತ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೆಶಕ (ಗ್ರಾ.ಉ.) ಪಿ.ಎಸ್.ಕಸನಕ್ಕಿ ಹೇಳಿದರು.
ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಗೋಮಾಳ ಜಾಗದಲ್ಲಿ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕವಡಿಮಟ್ಟಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತ ಮಾಹಿತಿ, ಶಿಕ್ಷಣ ಹಾಗೂ ಸಂಹವನ ಕಾರ್ಯಕ್ರಮ ಹಾಗೂ ಅರೋಗ್ಯ ಇಲಾಖೆ ಸಹಯೋಗದಲ್ಲಿ ನರೇಗಾ ಕೂಲಿಕಾರರಿಗೆ ಶುಕ್ರವಾರ ಅರೋಗ್ಯ ಉಚಿತ ತಪಾಸಣೆ ಶಿಬಿರ ನಡೆಯಿತು.
ದಿನ ನಿತ್ಯ ಬಿಸಿಲಿನಲ್ಲಿ ದುಡಿಯುವ ಕೂಲಿಕಾರರಿಗೆ ಮಧುಮೇಹ, ರಕ್ತದೊತ್ತಡ, ಮಲೇರಿಯಯಂತ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುತ್ತದೆ. ಅದ್ದರಿಂದ ಗ್ರಾಮ ಪಂಚಾಯತಿಯಿಂದ ಕೆಲಸ ನಿರ್ವಹಿಸುವ ಕಾಮಗಾರಿ ಸ್ಥಳದಲ್ಲೆ ಅರೋಗ್ಯ ಉಚಿತ ತಪಾಸಣೆ ಆಯೋಜಿಸಿ ಅವರ ಅರೋಗ್ಯ ಕಾಯ್ದುಕೊಳ್ಳಲು ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಚ. ಹಂಡ್ರಗಲ್ ಅವರು ಸ್ವತಃ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಅರೋಗ್ಯ ಉಚಿತ ಶಿಬಿರಕ್ಕೆ ಚಾಲನೆ ನೀಡಿದರು.
ಅರೋಗ್ಯ ಇಲಾಖೆಯ ಅಧಿಕಾರಿಗಳು ಕೂಲಿಕಾರರ ಅರೋಗ್ಯ ತಪಾಸಣೆ ಮಾಡಿ ಮಧುಮೇಹ, ರಕ್ತದೊತ್ತಡ, ಮಲೇರಿಯಾ ಹಾಗೂ ಕಫ ಪರೀಕ್ಷೆ ಮಾಡಿ ಸಮಾಲೋಚನೆ ಮಾಡಿದರು.
ತಾಲೂಕು ಪಂಚಾಯತ ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಆರೋಗ್ಯ ನಿರೀಕ್ಷಣಾಧಿಕಾರಿ ಕಲ್ಮೇಶಕುಮಾರ ಹೂಗಾರ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸದಾಶಿವ ಗುರುಶಾಂತನವರ್, ರಚನ ಸಬರದ್, ಗ್ರಾ.ಪಂ. ಸದಸ್ಯರಾದ ರೇವಣಸಿದ್ದಯ್ಯ ಗುರುವಿನ, ಮಲಕಯ್ಯ ಪೂಜಾರಿ, ಹನುಮಂತ ಹಂಡ್ರಗಲ್, ಕಾರ್ಯದರ್ಶಿ ಅಶೋಕ ಕೊರವರ, ಈರಯ್ಯ ಹೀರೆಮಠ, ಗ್ರಾ.ಪಂ.ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.