ನೂಲಿಯ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ : ಎಸಿ ಅಬೀದ್ ಗದ್ಯಾಳ
ಇಂಡಿ : ನುಡಿದಂತೆ ನಡೆದ ನೂಲಿಯ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ. ಅವರ ಜೀವನ ಆದರ್ಶಗಳನ್ನು ಬದುಕಲ್ಲಿ ಪಾಲಿಸಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಸೋಮವಾರ, ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿರುವ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಚಂದಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
12 ನೇ ಶತಮಾನದ ಕಾಲದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು. ಕಾಯಕ ನಿಷ್ಠೆಯಲ್ಲಿ ನುಲಿಯ ಚಂದಯ್ಯ ರಂತಹ ಶರಣರ ತತ್ವ ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು. ವಚನಗಳು ಸಾಮಾನ್ಯ ಜನರ ನಾಡಿಮಿಡಿತಗಳಾಗಿ, ವೈಚಾರಿಕ ಮತ್ತು ವೈಜ್ಞಾನಿಕ ಮನೋ ಚಿಂತನೆಗೆ ತಮ್ಮ ಕಾಯಕದ ಮೂಲಕ ಮಹತ್ವವನ್ನು ನೀಡಿದವರು ಶಿವಶರಣರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಶಿರಸ್ತೆದಾರ ಆರ್.ಬಿ ಮೂಗಿ, ಬಿ.ಎ ರಾವೂರ, ಎಸ್ ಆರ್ ಮುಜಗೊಂಡ, ಇನ್ನೂ ವಿವಿಧ ಇಲಾಖೆ ತಾಲೂಕು ಅಧಿಕಾರಿಗಳು ಹಾಗೂ ಶ್ರೀ ನೂಲಿಯ ಚಂದಯ್ಯ ತಾಲೂಕು ಸಮಾಜ ಸೇವಾ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಜಂತ್ರಿ, ಕಾರ್ಯದರ್ಶಿ ಸುನೀಲ ಬಜಂತ್ರಿ, ಉಪಾಧ್ಯಕ್ಷ ಸಿದ್ದಿಲಿಂಗ ಬಜಂತ್ರಿ, ದುಂಡಪ್ಪ ಬಜಂತ್ರಿ, ತುಕಾರಾಮ ಬಜಂತ್ರಿ, ಧರ್ಮಣ್ಣ ಬಜಂತ್ರಿ, ಸುಭಾಷ್ ಬಜಂತ್ರಿ, ಅರ್ಜುನ್ ಬಜಂತ್ರಿ ಇನ್ನೂ ಅನೇಕರು ಉಪಸ್ಥಿತರಿದ್ದರು.


















