ಸಿದ್ದೇಶ್ವರ ಜಾನುವಾರು ಜಾತ್ರೆ ವ್ಯವಸ್ಥಿತವಾಗಿ ಆಯೋಜನೆಗೆ ಸೂಚನೆ
Voice Of Janata :Editor : ಜಾನುವಾರು ಜಾತ್ರೆಯಲ್ಲಿ ಗಡಿ ಭಾಗವಾಗಿರುವುದರಿಂದ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ರೈತರು, ಜಾನುವಾರುಗಳು ಆಗಮಿಸಲಿರುವುದರಿಂದ ಸೂಕ್ತ ಲಸಿಕಾಕರಣ, ಜಾತ್ರೆಯಲ್ಲಿ ಭಾಗವಹಿಸಿದ ರೈತರಿಗೆ ನಿರಂತರವಾಗಿ ಕುಡಿಯುವ ನೀರಿನ ವ್ಯವಸ್ಥೆ, ಜಾತ್ರೆ ಸ್ಥಳದಲ್ಲಿ ಸ್ವಚ್ಚತೆ, ಒಂದು ವಾರಗಳ ಕಾಲಕ್ಕೂ ಹೆಚ್ಚಿನ ದಿನ ಜಾತ್ರೆ ನಡೆಯುವುದರಿಂದ ಸಮರ್ಪಕ ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಅಡೆ-ತಡೆ ಆಗದಂತೆ ನೋಡಿಕೊಂಡು ವ್ಯವಸ್ಥಿತವಾಗಿ ಜಾತ್ರೆ ಆಯೋಜಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ಧ್ಯಕ್ಷತೆ ವಹಿಸಿದ್ದ ಅವರು, ಪ್ರತಿ ವರ್ಷದಂತೆ ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.10ರಿಂದ 18ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ವಾರಕ್ಕೂ ಹೆಚ್ಚಿನ ಕಾಲ ಜಾತ್ರೆ ನಡೆಯುವುದರಿಂದ ಚಳಿಗಾಲವಿರುವುದರಿಂದ ಜಾನುವಾರುಗಳಿಗೆ ರೋಗ-ರುಜಿನಗಳು ಬರುವ ಸಾಧ್ಯತೆ ಇರುತ್ತದೆ. ಮುಂಜಾಗ್ರತಾ ಕ್ರಮವಾಗಿ ಲಸಿಕೆ, ಔಷದಿಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಸೂಕ್ತ ವೈದ್ಯೋಪಚಾರಕ್ಕೆ ಪಶು 5 ವೈದ್ಯಾಧಿಕಾರಿಗಳನ್ನು ನೇಮಿಸಿ, 3 ತಂಡಗಳನ್ನು ರಚಿಸಿ ವೈದ್ಯಕೀಯ ಸೇವೆ ಒದಗಿಸಬೇಕು. ಅತಿ ಹೆಚ್ಚು ಜನರು ಭಾಗವಹಿಸುವುದರಿಂದ ಸಾರ್ವಜನಿಕರು, ರೈತರ ಅನುಕೂಲಕ್ಕಾಗಿ ಆರೋಗ್ಯ ತಪಾಸಣಾ ಕೇಂದ್ರ, ಜಾನುವಾರು ಜಾತ್ರೆಯಲ್ಲಿ
ಜಾನುವಾರುಗಳಿಗೆ ರೋಗಗಳು ಹರಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಔಷಧಿ ಸಿಂಪರಣೆ (ಫಾಗಿಂಗ್) ಹಾಗೂ ಜಾತ್ರೆಯಲ್ಲಿ ದಿನನಿತ್ಯ ಶೇಖರಣೆಯಾಗುವ ಕಸವನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡುವುದು ಸೇರಿದಂತೆ ಮಹಾನಗರ ಪಾಲಿಕೆಯಿಂದ ಪಬ್ಲಿಕ್ ಮೊಬೈಲ್ ಶೌಚಾಲಯ ವ್ಯವಸ್ಥೆ, ಹೆಸ್ಕಾಂದಿಂದ ತಾತ್ಕಾಲಿಕವಾಗಿ ವಿದ್ಯುತ್ ವ್ಯವಸ್ಥೆ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.” ಜಾನುವಾರು ಜಾತ್ರೆಗೆ ಹೋಗಿ ಬರಲು
ಅನುಕೂಲವಾಗುವಂತೆ ಕೇಂದ್ರ ನಿಲ್ದಾಣದಿಂದ ಸೂಕ್ತ ಸಾರಿಗೆ ವ್ಯವಸ್ಥೆ, ಮುಖ್ಯ ರಸ್ತೆಯಿಂದ ಜಾನುವಾರು ಜಾತ್ರೆ ಸ್ಥಳಕ್ಕೆ ಹೋಗುವ ರಸ್ತೆಯನ್ನು ಸುಗಮಗೊಳಿಸಿ, ಜಾತ್ರೆ ಹೋಗುವ ರೈತರಿಗೆ ಅನುಕೂಲ ಕಲ್ಪಿಸುವುದು, ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನ ನಿಲುಗಡೆ, ಪೋಲಿಸ್ ಬಂದೋಬಸ್ತ್, ಹಾಗೂ ಪ್ರತಿ ದಿನ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಹಾಗೂ ಜಾನುವಾರುಗಳ ಮಾರಾಟದ ನಂತರ ರಸೀದಿ ನೀಡುವ ಸಂದರ್ಭದಲ್ಲಿ ಜಾನುವಾರುಗಳನ್ನು ಮಾರಾಟ ಮಾಡುವವರು ಹಾಗೂ ಕೊಳ್ಳುವವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ. ಆಧಾರ ಸಂಖ್ಯೆ ಪಡೆದುಕೊಳ್ಳುವಂತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟೆ ನಿಷೇಧಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋರೆ, ಯುಕ್ತ ಬದ್ದಿನ ಮಹಾನಗರ ಪಾಲಿಕೆ ಆಯುಕ್ತ ಸೌದಾಗರ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ತಹಶೀಲ್ದಾರ ಶ್ರೀಮತಿ ಕವಿತಾ ಆರ್. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಶ್ರೀಮತಿ ಎಂ.ವಿ.ಶೈಲಜಾ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅಶೋಕ ಘೋಣಸಗಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.