ಲಿಂಗಸೂಗೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮಾಜದ ಜೊತೆ ಬೆರತು ಜನರ ಕುಂದು ಕೊರತೆಗಳನ್ನು ಆಲಿಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬನ್ನಿಗೋಳ ಗ್ರಾಮದಲ್ಲಿ ಪಿ ಎಸ್ ಐ ಪ್ರಕಾಶ್ ರೆಡ್ಡಿ ಡಂಬಳ್ ಅವರ ನೇತೃತ್ವದಲ್ಲಿ ಸಾರ್ವಜನಿಕರ ಕಂದುಕೊರತೆ ಸಭೆ ನಡೆಸಲಾಯಿತು.
ಈ ಸಭೆಯ ಉದ್ದೇಶ ಅತೀ ಹೆಚ್ಚು ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹೊಂದಿರುವ ಹಳ್ಳಿಗಳನ್ನು ಗುರುತಿಸಿ, ಅಂತಹ ಹಳ್ಳಿಗಳಿಗೆ ಬೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸುವದಾಗಿದೆ.
ಈ ವೇಳೆ ಮುದಗಲ್ ಠಾಣೆಯ ಪಿಎಸ್ಐ ಪ್ರಕಾಶ್ ರೆಡ್ಡಿ ಡಂಬಳ್ ಮಾತನಾಡಿ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದರೆ ಕೂಡಲೇ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಅಲ್ಲದೆ ಮಹಿಳೆ ಮತ್ತು ಮಕ್ಕಳ ಮೇಲೆ ಲೈಗಿಂಕ ದೌರ್ಜನ್ಯ ಹಾಗೂ ಮುಂತಾದವುಗಳನ್ನು ಮಾಡಿದರೆ ಫೊಕ್ಸೋ ಕಾಯ್ದೆಯ ಅಡಿಯಲ್ಲಿ ಗಂಭೀರ ಪ್ರರಕರಣ ದಾಖಲಿಸಲಾಗುತ್ತದೆ.
ಇನ್ನು ಹಳ್ಳಿಗಳಲ್ಲಿ ಹೊಟೇಲ್, ಕಟಿಂಗ್ ಶಾಪ್, ಕುಡಿಯುವ ನೀರು ತುಂಬುವ ಸ್ಥಳಗಳಲ್ಲಿ ದಲಿತರಿಗೆ ಅವಮಾನ ವಾಗುವಂತಹ ರೀತಿಯಲ್ಲಿ ಯಾರೂ ನಡೆದುಕೊಳ್ಳಬಾರದು. ಸಮಾಜದಲ್ಲಿ ಎಲ್ಲರೂ ಸಾಮರಸ್ಯದಿಂದ ಬಾಳಬೇಕು.
ಇನ್ನು ತುರ್ತು ಸೇವೆಗಳಾದ ಫಯರ್, ಹೆಲ್ತ್, ಪೊಲೀಸ್ ಸಹಾಯ ಪಡೆಯಲು 112 ಗೆ ಕರೆ ಮಾಡಿ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.