ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ
ವಿಜಯಪುರ,೧೦- ವಿಜಯಪುರ ಜಿಲ್ಲೆಯಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಷ್ಕಾರ, ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಜುಲೈ 19 ರಂದು ಜರುಗಲಿರುವ ಸಮಾರಂಭ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವಂತೆ ಸಚಿವ ಶ್ರೀ ಶಿವಾನಂದ ಪಾಟೀಲ, ಮುಖ್ಯ ಮಂತ್ರಿಗಳ ಮಾದ್ಯಮ ಸಲಹೆಗಾರರಾದ ಶ್ರಿ ಕೆ.ವಿ.ಪ್ರಭಾಕರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಕಾನಿಪ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಇವರನ್ನು ಆವ್ಹಾನಿಸಲು ಜಿಲ್ಲೆಯ ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರರ್ಣಿ, ರಾಜ್ಯ ಕಾರ್ಯಕಾರಿ ನಾಮನಿರ್ದೇಶನ ಸದಸ್ಯ ಕೆ.ಕೆ.ಕುಲಕರ್ಣಿ ಹಾಗೂ ಜಿಲ್ಲಾ ಖಜಾಂಚಿ ರಾಹುಲ್ ಆಪ್ಟೆ ಅವರು ಬೆಂಗಳೂರಿಗೆ ತೆರಳಿ ಅತಿಥಿಗಳನ್ನು ಅಮಂತ್ರಿಸಿದರು.
ಈ ಎಲ್ಲರೂ ಕಾರ್ಯಕ್ರಮಕ್ಕೆ ಭಾಗವಹಿಸುವ ಭರವಸೆ ನೀಡಿದ್ಧಾರೆಂದು ಮೋಹನ ಕುಲಕರ್ಣಿ ತಿಳಿಸಿದ್ದಾರೆ.