ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ
-ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ವಿಜಯಪುರ ಮೇ.23 : ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಜತೆಗೆ ಇದಕ್ಕೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಶುಕ್ರವಾರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ 101 ಕೋಟಿ ರೂ.ಗಳ ವಿವಿಧ ಅಭಿವೃದ್ದಿ ಯೋಜನೆಗಳ ಕಾಮಗಾರಿಗೆ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವುದು ನಮ್ಮ ಸರ್ಕಾರದ ಸಂಕಲ್ಪವಾಗಿದ್ದು, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು, ಆಲಮಟ್ಟಿ ಆಣೆಕಟ್ಟು 524 ಮೀಟರ್ಗೆ ಎತ್ತರಿಸಲು ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಿದರು.
ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಎತ್ತರಿಸಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಈ ವಿಚಾರವಾಗಿ ಶಾಸಕರ ಜತೆ ಚರ್ಚೆ ಮಾಡಿದ್ದು, ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ. ಇತ್ತೀಚೆಗೆ ನಾನು ಹಾಗೂ ಸಿಎಂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಅಧಿಸೂಚನೆ ಹೊರಡಿಸಲು ಒತ್ತಡ ಹಾಕಿದ್ದೇವೆ. ಇದಕ್ಕಾಗಿ ಕೇಂದ್ರ ಸಚಿವರು ಸಭೆಯನ್ನು ಕರೆದಿದ್ದರು. ಆದರೆ ಕಾರಣಾಂತರಗಳಿಂದ ಅದನ್ನು ಮುಂದಕ್ಕೆ ಹಾಕಲಾಗಿದೆ” ಎಂದು ಮಾಹಿತಿ ನೀಡಿದರು.
ಬಸವಣ್ಣನವರು ಹುಟ್ಟಿದ ನಾಡಿಗೆ ಬಂದು, ಇಲ್ಲಿನ ಶರಣರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ಬುದ್ಧ, ಪ್ರೀತಿ ಹಾಗೂ ಶಾಂತಿ ಎಂದು ಹೇಳುತ್ತಾನೆ. ದುರ್ಯೋಧನ, ಹಠ ಹಾಗೂ ಛಲ ಎಂದು ಹೇಳುತ್ತಾನೆ. ಏಕಲವ್ಯ ಮತ್ತು ಅರ್ಜುನ, ಗುರಿ ಎಂದು ಹೇಳುತ್ತಾರೆ. ಧರ್ಮರಾಯ, ಸುಧರ್ಮ ಎನ್ನುತ್ತಾನೆ. ಕೃಷ್ಣ ತಂತ್ರ ಎಂದರೆ, ಭೀಷ್ಮ ಪ್ರತಿಜ್ಞೆ ಎನ್ನುತ್ತಾನೆ, ಸಂತರು ನಮ್ಮದು ಭಕ್ತಿ ಎನ್ನುತ್ತಾರೆ. ಅಲೆಕ್ಸಾಂಡರ್ ಯುದ್ಧ ಎನ್ನುತ್ತಾನೆ. ಬಸವಣ್ಣ ಸಮಾನತೆ, ಸರ್ವರಿಗೂ ಸಮಬಾಳು, ಸಮಪಾಲು ಎಂಬ ಪ್ರತಿಪಾದನೆಯಂತೆ ನಮ್ಮ ಸರ್ಕಾರ ಸರ್ವ ಜನರ ನೋವಿಗೆ ಸ್ಪಂದಿಸುತ್ತ, ಸರ್ವರಿಗೂ ಸಮಾನ ನ್ಯಾಯ ಒದಗಿಸುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸರ್ಕಾರ ಬಸವಣ್ಣ ಅವರನ್ನು ನಮ್ಮ ರಾಜ್ಯದ ಸಾಂಸ್ಕøತಿಕ ನಾಯಕ ಎಂದು ಘೋಷಣೆ ಮಾಡಿದೆ ಎಂದು ಹೇಳಿದರು.
ದೇವರು ವರವನ್ನೂ ಕೊಡಲ್ಲ, ಶಾಪವೂ ಕೊಡಲ್ಲ ಅವಕಾಶ ಮಾತ್ರ ನೀಡುತ್ತಾನೆ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧಿಸುತ್ತೇವೆ ಎಂಬುದು ಮುಖ್ಯವಾಗಿದೆ. ಕ್ಷೇತ್ರದ ಜನರ ಬದುಕು ಉದ್ಘಾರ ಮಾಡಬೇಕೆಂಬ ಛಲವನ್ನು ಹೊಂದಿರುವ ಈ ಕ್ಷೇತ್ರದ ಶಾಸಕರೂ ಆದ ಸಚಿವ ಶಿವಾನಂದ ಪಾಟೀಲರು ವಹಿಸಿಕೊಂಡಿರುವ ಇಲಾಖೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಶಿವಾನಂದ ಪಾಟೀಲ್ ಅವರ ನೇತೃತ್ವದಲ್ಲಿ ಅನೇಕ ಕೆಲಸಗಳು ನಡೆಯುತ್ತಿವೆ. ತಮಗೆ ಸಿಕ್ಕ ಅವಕಾಶವವನ್ನು ಸಮರ್ಥವಾಗಿ ಸದ್ಭಳಕೆ ಮಾಡಿಕೊಂಡು ಈ ಕ್ಷೇತ್ರದ ಜನರ ಸುಭದ್ರ ಬದುಕಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಹಲವು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದು, ಈ ಭಾಗದ ರೈತರ ಬದುಕು ಹಸನಾಗಿಸಲು ನಾವು ಬದ್ಧರಾಗಿದ್ದೇವೆ. ಈ ಭಾಗದಲ್ಲಿ ಕಾರ್ಖಾನೆಗಳು ಆರಂಭವಾಗಿ, ಉದ್ಯೋಗಗಳು ಸೃಷ್ಟಿಯಾಗುತ್ತಿದ್ದು, ಕೊಲ್ಹಾರ ಪಟ್ಟಣ ಅಭಿವೃದ್ದಿಗಾಗಿ 50 ಕೋಟಿ ರೂ.ಗಳ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು.
ಜವಳಿ, ಸಕ್ಕರೆ, ಕಬ್ಬು ಅಭಿವೃದ್ದಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಮಾತನಾಡಿ, ಮುಖ್ಯಮಂತ್ರಿಗಳು ಹಾಗೂ ತಾವು ಮನಸ್ಸು ಮಾಡಿ ಪ್ರಥಮ ಹಂತದಲ್ಲಿ ಆಣೆಕಟ್ಟು ಒಂದು ಮೀಟರ್ ಹೆಚ್ಚಿಸುವಂತೆ ಮನವಿ ಮಾಡಿ ಮಾಡಿದ ಅವರು, ಹೆಚ್ಚಿನ ನೀರಿನ ಸಂಗ್ರಹವಾದಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆಗಳಿಗೆ ವರದಾನವಾಗಲಿದೆ. ಜಿಲ್ಲೆಗೆ ಸಿಗಬೇಕಾದ 80 ಟಿಎಂಸಿ ನೀರಿನಲ್ಲಿ ತ್ವರಿತವಾಗಿ 40 ಟಿಎಂಸಿ ನೀರೊದಗಿಸುವ ಮೂಲಕ ಜಿಲ್ಲೆಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಹೇಳಿದರು.
ಆಣೆಕಟ್ಟೆಯ ಸದ್ಯ ಇರುವ ಎತ್ತರ 519 ಮೀಟರ್ನಿಂದ 520 ಮೀಟರ್ಗೆ ಎತ್ತರಿಸುವುದರಿಂದ ಯಾವುದೇ ಕಾನೂನು ತೊಡಕು ಆಗುವುದಿಲ್ಲ ಎಂದು ನೀರಾವರಿ ತಜ್ಞ ಮೋಹನ್ ಕಾತರಕಿ ಅವರು ಮುಖ್ಯಮಂತ್ರಿ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಯುಕೆಪಿ ವ್ಯಾಪ್ತಿಯ ಶಾಸಕರು, ಸಚಿವರ ಸಭೆಯಲ್ಲಿ ಸಲಹೆ ನೀಡಿದ್ದಾರೆ, ಈ ಕಾರ್ಯಕ್ಕೆ ಕೇವಲ 25 ಸಾವಿರ ಕೋಟಿ ರೂ. ಒದಗಿಸಿದರೆ ಸಾಕು ಎಂದು ಅವರು ಹೇಳಿದರು.
ಮುಳುಗಡೆ ಪ್ರದೇಶಗಳಲ್ಲಿ ಅತ್ಯಂತ ದೊಡ್ಡದಾದ ಪ್ರದೇಶ ಕೊಲ್ಹಾರ. ಈ ಪ್ರದೇಶದ ಜನ ತ್ಯಾಗ ಮಾಡಿದ್ದಾರೆ. ತಮ್ಮ ಭೂಮಿಯನ್ನು ನೀಡಿದ್ದಾರೆ. ದುರದೃಷ್ಟವಶಾತ ತ್ಯಾಗ ಮಾಡಿದ ಜನರಿಗೆ ಇನ್ನೂ ನ್ಯಾಯ ದೊರಕಿಲ್ಲ ಎಂದು ತಿಳಿಸಿದ ಅವರು, ಆಲಮಟ್ಟಿ ಎತ್ತರ ಹೆಚ್ಚಿಸುವ ಮೂಲಕ ಈ ಸಂತ್ರಸ್ಥರ ಹಾಗೂ ಜಿಲ್ಲೆಯ ಜನರಿಗೆ ನ್ಯಾಯ ಒದಗಿಸುವಂತೆ ಬೇಡಿಕೆ ಸಲ್ಲಿಸಿದ ಅವರು, ಕೊಲ್ಹಾರದಲ್ಲಿ ಸರ್ಕಾರಿ ಕಚೇರಿಗಳ ಸ್ಥಾಪನೆ, ಪುನರ್ ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯ ಕೈಗೊಂಡು, ಹೆಚ್ಚುವರಿಯಾಗಿ 100 ಎಕರೆ ಜಮೀನನ್ನು ಕೊಲ್ಹಾರ ಪಟ್ಟಣಕ್ಕೆ ನೀಡಬೇಕು ಎಂದು ಅವರು ಹೇಳಿದರು.
ಮಾಜಿ ಸಚಿವ ಎಸ್.ಆರ್. ಪಾಟೀಲ ಅರು ಮಾತನಾಡಿ, ಕೃμÁ್ಣ ಮೇಲ್ದಂಡೆ ಯೋಜನೆ ಮೂರನೇಯ ಹಂತದ ಯೋಜನೆಗಳು ಅನುμÁ್ಠನಗೊಂಡಲ್ಲಿ ವಿಜಯಪುರ ಜಿಲ್ಲೆ ದೇಶದಲ್ಲಿಯೇ ಅತಿ ಅಭಿವೃದ್ದಿ ಹೊಂದಿರುವ ಜಿಲ್ಲೆಯಾಗಲಿದೆ. ಕಳೆದ 60 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಈ ಯೋಜನೆಯನ್ನು ಮುಂದಿನ 3 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವ ನಂಬಿಕೆ ಇದ್ದು, 130 ಟಿಎಂಸಿ ನೀರು ಸದ್ಬಳಕೆಯಾದಲ್ಲಿ ಸಂಪದ್ಭರಿತ ಜಿಲ್ಲೆಯೊಂದಿಗೆ ಉತ್ತರ ಕರ್ನಾಟಕ 7 ಜಿಲ್ಲೆಗಳ 15 ಲಕ್ಷ ಎಕರೆ ಜಮೀನು ನೀರಾವರಿಗೊಳಪಡಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಮಹಾಸ್ವಾಮೀಜಿ ಕೊಲ್ಹಾರ ದಿಗಂಬರೇಶ್ವರ ಮಠದ ಶ್ರೀ ಯೋಗಿ ಕಲ್ಲಿನಾಥ ಸಾನಿಧ್ಯ ವಹಿಸಿದ್ದರು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಿಂದಗಿ ಶಾಸಕ ಅಶೋಕ ಮನಗೂಳಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕೆಬಿಜೆಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಮೋಹನ ರಾಜು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.


















