ಸಂವಿಧಾನ ಶಿಲ್ಪಿ ಪ್ರತಿಮೆಗೆ ಅವಮಾನ..! ಕಿಡಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ..!
ರಸ್ತೆ ತಡೆದು ಟೈಯರ್ ಸುಟ್ಟು ಅಕ್ರೋಷ..
ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕೋಟನೂರ್ (ಡಿ) ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಂಗಳವಾರ ಬೆಳಿಗ್ಗೆಯಿಂದ ದಲಿತ ಮುಖಂಡರು ನಗರದ ಹೀರಾಪೂರದಲ್ಲಿ ಘಟನೆಯನ್ನು ಖಂಡಿಸಿ ರಸ್ತೆಗಳನ್ನು ತಡೆದು ಟೈರಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅದಲ್ಲದೇ ದಲಿತ ಸಂಘಟನೆಗಳು ರಾಮ ಮಂದಿರ, ಫರತಹಬಾದ್, ಜೇವರ್ಗಿ ತಾಲ್ಲೂಕು, ತೀಮ್ಮಾಪುರಿ ಸರ್ಕಲ್ ಸೇರಿದಂತೆ ಹಲವೆಡೆ ಪ್ರತಿಭಟನೆಗಳನ್ನು ನಡೆಸಿದ್ದು, ಸಂಚಾರ ಮತ್ತು ಮಳಿಗೆಗಳುನ್ನು ಬಂದ್ ಮಾಡಿಸಿ ಟೈರ್ ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.