ಲಿಂಗಸೂಗೂರು: ತಾಲೂಕಿನ ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಛತ್ತರ ಗ್ರಾಮದಲ್ಲಿ ಪಿಎಸ್ಐ ಪ್ರಕಾಶ್ ರೆಡ್ಡಿ ಡಂಬಳ್ ನೇತೃತ್ವದಲ್ಲಿ ಜನ ಸಂಪರ್ಕ ಸಭೆ ನಡೆಸಲಾಯಿತು.
ಸಭೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಅಪರಾಧಗಳು, ಸೈಬರ್ ಅಪರಾಧಗಳು ಮತ್ತು ಬಾಲ್ಯ ವಿವಾಹ ಪ್ರಕರಣಗಳು, ಬ್ಯಾಂಕ್ ವಂಚನೆ ಹಾಗೂ ನಕಲಿ ಜಾಬ್ ಆಫರ್ಗಳಿಗೆ ಸಂಬಂಧಿಸಿದ ಅಪರಾಧಗಳು, POCSO (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣಗಳು ಅಲ್ಲದೆ ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.