ರಾಯಚೂರು: ನಮ್ಮ ನೀರು ನಮ್ಮ ಹಕ್ಕು ಮೇಕೆದಾಟು ನೀರಿನ ಯೋಜನೆಯ ಪಾದಯಾತ್ರೆಯಲ್ಲಿ ಭಾಗವಹಿಸಲು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ವಿ.ನಾಯಕರವರ ನೇತೃತ್ವದಲ್ಲಿ ತೆರಳಿದ ರಾಯಚೂರು ಜಿಲ್ಲೆಯ ಕಾಂಗ್ರೆಸ್ ನಾಯಕರುಗಳು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿ ಬಿಡದಿಯಿಂದ ಪ್ರಾರಂಭವಾದ ಎರಡನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಈ ಪಾದಯಾತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ವಿ.ನಾಯಕ, ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ ಶಾಸಕರುಗಳಾದ ಬಸನಗೌಡ ದದ್ದಲ, ಡಿ.ಎಸ್.ಹುಲಗೇರಿ, ಬಸನಗೌಡ ತುರುವಿಹಾಳ, ಶರಣಗೌಡ ಬಯ್ಯಾಪುರ, ಮಾಜಿ ಎಂಎಲ್ಸಿ ಯಾದ ಶರಣಪ್ಪ ಮಟ್ಟೂರು ಹಾಗೂ ಮುಖಂಡರುಗಳಾದ ಎ.ವಸಂತ ಕುಮಾರ, ಜಿ.ಬಸವರಾಜ ರೆಡ್ಡಿ, ಅಬ್ದುಲ್ ಕರೀಂ, ಆಂಜನೇಯ ಕುರುಬದೊಡ್ಡಿ, ಅಸ್ಲಂ ಪಾಷಾ, ರಾಮಕೃಷ್ಣ ನಾಯಕ, ಮಲ್ಲಿಕಾರ್ಜುನ ಯದ್ದಲದಿನ್ನಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.