ವಿಜಯಪುರ : ಅಲಿಯಾಬಾದ್ ಕ್ರಾಸ್ ಬಳಿ ನಿರ್ಮಿಸಲಾಗುತ್ತಿರುವ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸುವಂತೆ ಅಧಿಕಾರಿ ಹಾಗೂ ಸಂಬAಧಿಸಿದ ಗುತ್ತಿಗೆದಾರರಿಗೆ ಸಂಸದ ರಮೇಶ ಜಿಗಜಿಣಗಿ ನಿರ್ದೇಶನ ನೀಡಿದರು.
ಸೋಮವಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ ಸೇರಿದಂತೆ ಹಲವಾರು ಅಧಿಕಾರಿಗಳ ಸಮ್ಮುಖದಲ್ಲಿ ಇಂಡಿ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆರ್ಓಬಿ ಕಾಮಗಾರಿಯನ್ನು ಖುದ್ದು ಪರಿಶೀಲನೆ ನಡೆಸಿದರು. ಕಾಮಗಾರಿಯ ಹಂತ ಮೊದಲಾದ ವಿವರಗಳನ್ನು ಪಡೆದುಕೊಂಡರು.
ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು, ಯಾವ ಕಾರಣಕ್ಕೂ ವಿಳಂಬ ನೀತಿ ಅನುಸರಿಸಬೇಡಿ, ನಿಗದಿತ ೨೦೨೭ ರ ಜನವರಿ ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಆರ್ಓಬಿ ಲೋಕಾರ್ಪಣೆಯಾಗುವಂತೆ ನೋಡಿಕೊಳ್ಳಿ, ಯಾವ ಲೋಪದೋಷ ಇರಬಾರದು, ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ತಾಕೀತು ಮಾಡಿದರು. ಸಂಚಾರ ದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರ್ಓಬಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಇಬ್ರಾಹಿಂಪೂರದಲ್ಲಿ ಆರ್ಓಬಿ ನಿರ್ಮಾಣದಿಂದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಿದೆ, ಹೀಗಾಗಿ ಪ್ರಸ್ತುತ ಆರ್ಓಬಿ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಎಂದರು.
ಆರ್ಓಬಿ ಕಾಮಗಾರಿಯ ಭೌತಿಕ ಪ್ರಗತಿಯ ಕುರಿತು ವಿವರಣೆ ನೀಡಿದ ಎನ್ಎಚ್ಎಐ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಪಾಟೀಲ, ಪ್ರಸ್ತುತ ಶೇ.೫೦ ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು ೯೫೭.೦೯ ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ, ಪೂರಕವಾದ ರಸ್ತೆ, ಬಸ್ ಬೇಯ್, ೧೫ ಪ್ರಮುಖ ಜಂಕ್ಷನ್ ಮೊದಲಾದ ಕಾಮಗಾರಿಗಳನ್ನು ಇದರಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.
ಎಇಇ ವಿವೇಕ ಮಠ, ಪಾಲಿಕೆ ಸದಸ್ಯ ಮಳುಗೌಡ ಪಾಟೀಲ, ವಿಜಯ ಜೋಶಿ, ಉದಯ ಕನ್ನೊಳ್ಳಿ ಪಾಲ್ಗೊಂಡಿದ್ದರು.


















