ರಾಯಚೂರು : ಈ ವರ್ಷದಿಂದ ಗಣರಾಜ್ಯೋತ್ಸವ ಆಚರಣೆಯನ್ನು ಮೂರು ದಿನಗಳ ಮುಂಚೆಯೇ ಆರಂಭಿಸಲು ಕೇಂದ್ರ ಮತ್ತು ರಾಜ್ಯಗಳ ನಿರ್ಧರಿಸಿದ್ದು ಇಂದಿನಿಂದಲೇ ಗಣರಾಜ್ಯೋತ್ಸವದ ಸಂಭ್ರಮ ರಾಜ್ಯದಲ್ಲಿ ಮನೆ ಮಾಡಲಿದೆ.
ಹೌದು ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಸುಭಾಷ ಚಂದ್ರ ಬೋಸ್ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕೇಂದ್ರ ಮತ್ರು ರಾಜ್ಯ ಸರ್ಕಾರಗಳು ನಿರ್ಧರಿಸಿದೆ.

ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ಜನವರಿ 23 ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ನಡೆಸಿದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಬೆಂಗಳೂರಿನ ಜಕ್ಕೂರಿನ ವೈಮಾನಿಕ ತರಬೇತಿ ಶಾಲೆಯ ಆವರಣದಲ್ಲಿ ಸುಭಾಷ್ ಚಂದ್ರ ಬೋಸ್ರವರ 125ನೇ ಜನ್ಮ ದಿನಾಚರಣೆಯನ್ನು ಮಾಡಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನೂರು ಜನ ಎನ್ಸಿಸಿ ಕೆಡಿಟ್ ಮತ್ತು ಕಮಾಂಡರ್ಗಳು ಭಾಗಿಯಾಗಲಿದ್ದಾರೆ. ಇದರೊಂದಿಗೆ ರಾಜ್ಯಾದ್ಯಂತ ಎಲ್ಲಾ ಕಡೆ ಬಾಗಿಲು ಕೂಡ ಇನ್ನೊಂದು ಆಚರಣೆ ಚಾಲನೆ ನೀಡಲಾಗುತ್ತದೆ.
ಇದು ಸುಭಾಷ್ ಚಂದ್ರ ಬೋಸ್ರವರ 125ನೇ ಜನ್ಮ ದಿನ. ಹೀಗಾಗಿ ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ವರ್ಷವಿಡೀ ಸುಭಾಷ್ ಚಂದ್ರ ಬೋಸ್ ಅವರ ಕುರಿತಾದ ಕಾರ್ಯಕ್ರಮಗಳನ್ನು ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ವಿಶೇಷವಾದ ಹಾಗೂ ಅರ್ಥಪೂರ್ಣ ಕಾರ್ಯಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಚಿಂತಿಸಲಾಗಿದೆ. ವಿವಿಧ ಇಲಾಖೆಗಳಲ್ಲಿ ರೂಪಕಗಳ ಮೂಲಕ ಮನೆಮನೆಗಳಲ್ಲಿ ಯೋಜನೆಗಳನ್ನು ಜಾರಿಗೆ ತರಲಾಗುವುದು.
ಇನ್ಮುಂದೆ ಪ್ರತಿ ಬಾರಿಯ ಗಣರಾಜ್ಯೋತ್ಸವವು ಜನವರಿ 24ರ ಬದಲಿಗೆ ಜನವರಿ 23ರಿಂದ ಪ್ರಾರಂಭವಾಗಲಿದೆ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಒಳಗೊಂಡಿರುತ್ತದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಭಾರತದ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಸ್ಮರಿಸಲು ಕೇಂದ್ರ ಸರ್ಕಾರವೂ ನಿರ್ಧರಿಸಿದೆ. ಇದು ಮೊದಲು ಸುಭಾಷ ಚಂದ್ರಬೋಸ್ ಅವರ ಜನ್ಮ ವಾರ್ಷಿಕೋತ್ಸವವನ್ನು “ಪರಾಕ್ರಮ್ ದಿವಸ್’ ಎಂದು ಆಚರಿಸಲು ಪ್ರಾರಂಭಿಸಿತ್ತು.
ಭಾರತದ ಮೊದಲ ಸೇನೆಯ ಸ್ಥಾಪಕನ ಶೌರ್ಯ ಮತ್ತು ಧೈರ್ಯವನ್ನು ಗೌರವಿಸಲು ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸಲಾಗುವುದು ಎಂದು ಕೇಂದ್ರವು ಈ ಹಿಂದೆ ಘೋಷಿಸಿತ್ತು. ಅಂತಹ ಇತರ ದಿನಗಳನ್ನು ಆಚರಿಸುವುದು ವಾರ್ಷಿಕ ವ್ಯವಹಾರವಾಗಿದ್ದು, ಅದರಲ್ಲಿ ಆಗಸ್ಟ್ 14 ಅನ್ನು ವಿಭಜನೆಯ ಕರಾಳ ನೆನಪಿನ ದಿನ, ಅಕ್ಟೋಬರ್ 31 ಅನ್ನು ರಾಷ್ಟ್ರೀಯ ಏಕತಾ ದಿನ ಸರ್ದಾರ್ ಪಟೇಲ್ ಅವರ ಜನ್ಮದಿನ. ನವೆಂಬರ್ 15 ಅನ್ನು ಜನಜಾತಿಯ ಗೌರವ್ ದಿವಸ್ (ಬಿರ್ಸಾ ಮುಂಡಾ ಅವರ ಜನ್ಮ ವಾರ್ಷಿಕೋತ್ಸವ), ನವೆಂಬರ್ 26 ಅನ್ನು ಸಂವಿಧಾನದ ದಿನವಾಗಿ ಮತ್ತು ಡಿಸೆಂಬರ್ 26ರಂದು ವೀರ್ ಬಾಲ್ ದಿವಸ್ (ಗುರು ಗೋವಿಂದ್ ಸಿಂಗ್ ಅವರ ನಾಲ್ವರು ಪುತ್ರರಿಗೆ ಗೌರವ) ಎಂದು ಸೇರಿಸಲಾಗಿದೆ.
ಕೇಂದ್ರ ಸರ್ಕಾರ ಈ ಎಲ್ಲಾ ದಿನಗಳಲ್ಲಿ ವರ್ಷದಿಂದ ಆಚರಣೆ ಮಾಡಲು ಸಿದ್ಧತೆ ಮಾಡಲಾಗಿದೆ ಒಟ್ಟಾರೆಯಾಗಿ ಈ ಬಾರಿಯ ಗಣರಾಜ್ಯೋತ್ಸವ 23 ನೇ ತಾರೀಖಿನಿಂದಲೇ ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ ಇಂದು ಪರಾಕ್ರಮಗಳಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವ ಆಚರಣೆಗೆ ಚಾಲನೆ ನೀಡಿದಂತಾಗುತ್ತದೆ



















