ಇಂಡಿ : ಪದವಿ ಪೂರ್ವ ಕಾಲೇಜುಗಳಲ್ಲಿ ಭಾರತ ಸೇವಾದಳ ಘಟಕವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಕಳೆದ ನಾಲ್ಕೈದು ವರ್ಷಗಳ ಹಿಂದೆಯೇ ಸುತ್ತೋಲೆಯೊಂದನ್ನು ಹೊರಡಿಸಿದ್ಧು ಅದರನ್ವಯ ಎಲ್ಲಾ ಪದವಿ ಪೂರ್ವ ಕಾಲೇಜಿಗಳಲ್ಲಿ ಭಾರತ ಸೇವಾದಳ ಶಾಖೆಯನ್ನು ಆರಂಭಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮವನ್ನು ಬೆಳೆಸಬೇಕಾದ ಜವಾಬ್ದಾರಿ ಪ್ರಾಧ್ಯಾಪಕರ ಮೇಲಿದೆ ಎಂದು ಸೇವಾದಳದ ಜಿಲ್ಲಾ ಉಪಾಧ್ಯಕ್ಷ ಶ್ರೀಮಂತ ಜೆ ಇಂಡಿ ಹೇಳಿದರು.
ಸ್ಥಳಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ ಸೇವಾದಳ ಜಿಲ್ಲಾ ಘಟಕ ವಿಜಯಪುರ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಇವರ ಆಶ್ರಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕರೋಲಿನಾ ಜಾಗೃತ ಕಾರ್ಯಾಗಾರದಲ್ಲಿ ಹೇಳಿದರು.
ಸರಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳು ಎಮ್.ಪಿ.ಬಿರಾದಾರ ಮತ್ತು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಹಿರಿಯ ಉಪನ್ಯಾಸಕಿ ಎಸ್. ಹೆಚ್. ಪಾಟೀಲ ಮಾತನಾಡಿದ ಅವರು, ಭಾರತ ಸೇವಾದಳ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ, ಭಾವೈಕ್ಯತೆ, ಶಿಸ್ತು, ಮತ್ತು ಸೌಹಾರ್ದತೆ ಬೆಳೆಸುವ ಮೂಲಕ ಸದ್ರಡ ದೇಶ ಕಟ್ಟುವ ನಾಗರಿಕರನ್ನಾಗಿ ರೂಪಿಸುವ ನಿಟ್ಟಿನಲ್ಲಿ ಭಾರತ ಸೇವಾದಳ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು. ಜೊತೆಗೆ ಭಾರತ ಸೇವಾದಳ ಸಂಸ್ಥೆಯಿಂದ ಉಚಿತವಾಗಿ ಕೊಡಮಾಡಿದ ಮಾಸ್ಕ್ ಹಾಗೂ ಸ್ಯಾನಿಟೈಸರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.
ಇದೇ ಸಂದರ್ಭದಲ್ಲಿ ಭಾರತ ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ, ಸಂಪನ್ಮೂಲ ಶಿಕ್ಷಕ ಅಂಬಣ್ಣ ಸುಣಗಾರ, ಜಿ.ಜಿ. ಬರಡೋಲ, ಎಸ್.ಬಿ. ಕಲ್ಲೋಳ್ಳಿ, ಕ.ಜಾ.ಪ ಅಧ್ಯಕ್ಷ ಆರ್.ವಿ. ಪಾಟೀಲ ಹಾಗೂ ಕಾಲೇಜಿನ ಉಪನ್ಯಾಸಕ ವರ್ಗ, ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ ಪ್ರಾಸ್ತಾವಿಕವಾಗಿ ಮಾತನಾಡಿದರು, ಆರ್.ಡಿ. ಪಾಟೀಲ ಸ್ವಾಗತಿಸುವದರೊಂದಿಗೆ ಕಾರ್ಯಕ್ರಮ ನಿರೂಪಿಸಿದರು, ಆರ್.ಆರ್.ಬೆಂಗಾಲಿ ವಂದಿಸಿದರು.