ಪರಿಶಿಷ್ಟರ ಅನುದಾನ ಗ್ಯಾರಂಟಿ ಯೋಜನೆಗೆ ; ಸರಕಾರದ ನಿರ್ಧಾರದ ವಿರುದ್ಧ ಆಕ್ರೋಶ..!
ಇಂಡಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ SC/ST ಸಮುದಾಯಗಳಿಗೆ ಮೀಸಲು ಇರುವ 11 ಸಾವಿರ ಕೋಟಿ ಅನುದಾನವನ್ನು ಉಪಯೋಗಿಸುವುದನ್ನು ವಿರೋಧಿಸುತ್ತೆವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುತ್ತಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ವಿರೋಧಿಸುತ್ತದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಆಗ್ರಹಿಸಿ ದಲಿತ್ ವಿಧ್ಯಾರ್ಥಿ ಪರಿಷತ್ ಇಂಡಿ ಘಟಕದಿಂದ ತಹಶಿಲ್ದಾರ ನಾಗಯ್ಯ ಹಿರೇಮಠ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
SC/ST ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರ, ಒಟ್ಟಾರೆ ಈ SC /ST ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಈ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಅಧ್ಯಕ್ಷ ವಿನೋದ ಕಾಳೆ, ರವಿಕುಮಾರ್ ಶಿಂಗೆ, ಆಕಾಶ ಹಾದಿಮನಿ, ಗಂಗಾಧರ ಕಾಳೆ, ರಾಹುಲ ಮನಗೂಳಿ, ಸಂತೋಷ ತಳಕೇರಿ, ಪ್ರವೀಣ ಕಾಂಬಳೆ, ರಾಮ ಪೂತೆ ಹಾಗೂ ವಿದ್ಯಾರ್ಥಿ ಸಮೋಹ ಉಪಸ್ಥಿತರಿದ್ದರು…