ಇಂಡಿಯಲ್ಲಿ ವಿಜ್ಞಾನಿಗಳ ನಡಿಗೆ ರೈತರ ಕಡೆಗೆ ಕಾರ್ಯಕ್ರಮ
ಇಂಡಿ : 17-ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ.ಎಲ್.ಪಾಟೀಲ ರವರ ಕನಸಿನ ಯೋಜನೆಯಾದ ವಿಜ್ಞಾನಿಗಳ ನಡಿಗೆ, ರೈತರ ಕಡೆಗೆ ಎಂಬ ವಿನೂತನ ಕಾರ್ಯಕ್ರಮವನ್ನು ಉತ್ತರ ಕರ್ನಾಟಕದ ಧಾರವಾಡ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದು, ಅದರಂತೆ (18-7-2024)ರಂದು ಬೆಳಿಗ್ಗೆ 10 ಗಂಟೆಗೆ ಇಂಡಿ ಕೃಷಿ ವಿಜ್ಞಾನ ಕೇಂದ್ರ, ಶ್ರೀ ಶಿವಯೋಗಿಶ್ವರ ದೇವಸ್ಥಾನ ಸಮಿತಿ ಇವರ ಸಹಯೋಗದೊಂದಿಗೆ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದ ಶ್ರೀ ಶಿವಯೋಗೀಶ್ವರ ಮಂಗಲ ಕಾರ್ಯಾಲಯದಲ್ಲಿ ಲಿಂಬೆ ಮತ್ತು ಕಬ್ಬು ಬೆಳೆಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಧಾರವಾಡ ಕೃಷಿ ವಿವಿ ಕುಲಪತಿ ಡಾ. ಪಿ.ಎಲ್ ಪಾಟೀಲ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ದೇವಸ್ಥಾನದ ಸೋಮಯ್ಯ ಚಿಕ್ಕಪಟ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ, ವಿಸ್ತರಣಾ ನಿರ್ದೇಶಕ ಡಾ. ಎಸ್ ಎಸ್ ಅಂಗಡಿ, ಸಂಶೋಧನಾ ನಿರ್ದೇಶಕ ಡಾ. ಬಿ. ಡಿ ಬಿರಾದಾರ, ಜಂಟಿ ಕೃಷಿ ನಿರ್ದೇಶಕ ಡಾಕ್ಟರ ವಿಲಿಯಂ ರಾಜಶೇಖರ್ ಸೇರಿದಂತೆ ವಿಜ್ಞಾನಿಗಳು ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ರೈತರು ಭಾಗವಹಿಸಲಿದ್ದಾರೆ ಎಂದು ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಶಂಕರ ಮೂರ್ತಿ ತಿಳಿಸಿದ್ದಾರೆ.


















