“ಆಹಾರ ಸಂಸ್ಕರಣೆ ಮೂಲಕ ಮಹಿಳೆಯರಿಗೆ ಸ್ವಯಂ ಉದ್ಯೋಗ”
ವಿಜಯಪುರ: ಸ್ಥಳೀಯ ಆಹಾರಗಳ ಮೌಲ್ಯವರ್ಧನೆಯ ಮೂಲಕ ಮಹಿಳೆಯರು ಆಹಾರೋದ್ಯಮದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅನನ್ಯ ಆಹಾರ ಸಂಸ್ಕರಣೆ ಮತ್ತು ಕೇಂದ್ರ ಹಾಗೂ ರಾಜ್ಯಶಾಸ್ತç ಅಧ್ಯಯನ ವಿಭಾಗದ ಸಹಯೋಗದಲ್ಲಿ ಪ್ರಧಾನಮಂತ್ರಿ ಉಚ್ಛ ಶಿಕ್ಷಾ ಅಭಿಯಾನದ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಇತ್ತೀಚಿಗೆ ಹಮ್ಮಿಕೊಂಡಿದ್ದ “ಆಹಾರ ಸಂಸ್ಕರಣೆಯಲ್ಲಿ ಮೌಲ್ಯವರ್ಧನೆ ಹಾಗೂ ಉದ್ಯಮಶೀಲತೆ ಕೌಶಲ್ಯಗಳು” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಸ್ವಯಂ ಉದ್ಯೋಗದ ಕಡೆಗೆ ಗಮನಹರಿಸಿ, ಆಹಾರೋದ್ಯಮವನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಪೂರಕವಾದ ಕೌಶಲ್ಯಗಳನ್ನು ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವ ಮೂಲಕ ವೃದ್ಧಿಸಿಕೊಳ್ಳಬೇಕು ಎಂದುರು.
ಸAಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಅಶ್ವಿನಿ ದೇಸಾಯಿ ಮಾತನಾಡಿ, ಮಹಿಳೆಯರು ಕೇವಲ ಅಡಿಗೆಮನೆಯ ಜವಾಬ್ದಾರಿಗೆ ಸೀಮಿತಗೊಳ್ಳದೆ ಅಡುಗೆಯನ್ನು ಉದ್ಯಮವಾಗಿ ರೂಪಿಸುವತ್ತ ದಿಟ್ಟ ಹೆಜ್ಜೆ ಇಡಬೇಕು ಹಾಗೂ ದೃಢತೆಯೊಂದಿಗೆ ಸ್ವಾವಲಂಬಿ ಬದುಕನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಪ್ರೇರೇಪಿಸಿದರು.
ವಿಜಯಪುರದ ಕೃಷಿ ವಿಜ್ಞಾನ ಕೇಂದ್ರದ ಗೃಹವಿಜ್ಞಾನ ವಿಷಯ ತಜ್ಞೆ ಶ್ವೇತಾ ಮನ್ನಿಕೇರಿ ಮಾತನಾಡಿ, ಮಹಿಳೆಯರಿಗೆ ಆಹಾರೋದ್ಯಮ ಸ್ಥಾಪಿಸಲು ಅಗತ್ಯವಿರುವ ಮೂಲಭೂತ ಕೌಶಲ್ಯಗಳ ಕುರಿತು ವಿವರಿಸಿದರು. ಇದೇ ವೇಳೆ ವಿದ್ಯಾರ್ಥಿನಿಯರಿಗೆ ಲಿಂಬೆಹಣ್ಣಿನಿAದ ಸ್ಕಾ÷್ವಶ್, ಕ್ಯಾಂಡಿ ಹಾಗೂ ಸೋಪ್ ತಯಾರಿಕೆ ಕುರಿತು ಪ್ರದರ್ಶನ ನೀಡಿದರು.
ಇದೇ ಸಂದರ್ಭದಲ್ಲಿ ಡಾ. ಸವಿತಾ ಹುಲಮನಿ ಸಮತೋಲನ ಆಹಾರದ ಮಹತ್ವದ ಕುರಿತು ಮಾತನಾಡಿದರು, ಹಾಗೂ ವೈಭವಲಕ್ಷಿö್ಮ ಗೃಹ ಉದ್ಯೋಗದಲ್ಲಿ ತಯಾರಿಸುವ ವಿವಿಧ ಆಹಾರೋತ್ಪನ್ನಗಳ ಕುರಿತು ಪರಿಚಯಿಸಿದರು.
ಕ್ರಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ಪ್ರೊ. ಲಕ್ಷಿö್ಮದೇವಿ ವಾಯ್, ಮಹಿಳಾ ತಂತ್ರಜ್ಞಾನ ಪಾರ್ಕನ ವಿಶೇಷಾಧಿಕಾರಿ ಪ್ರೊ. ರಾಜು ಬಾಗಲಕೋಟ, ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಭೋಧಕೇತರ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಾರ್ಯಕ್ರಮ ಸಂಯೋಜಕ ಡಾ. ನಟರಾಜ ದುರ್ಗಣ್ಣವರ ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು. ವಿದ್ಯಾರ್ಥಿನಿ ಅಮೀನಾ ನಿರೂಪಿಸಿದರು.



















