ಕಿರು ಸೇತುವೆ ಕಾಮಗಾರಿ ವಿಳಂಬ?
ಅಪಾಯದಲ್ಲಿ ಸಂಚರಿಸುತ್ತಿರುವ ವಾಹನ ಸವಾರರು..!
ಹನೂರು: ತಾಲೂಕಿನ ಮಲೈ ಮಾದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲೇಮಾಳ ಮತ್ತು ಹನೂರು ಮಾರ್ಗ ಮದ್ಯೆ ಕಾಮಗಾರಿ ಪ್ರಗತಿಯಲ್ಲಿರುವ ಲೋಕೋಪಯೋಗಿ ಇಲಾಖೆ ಹಾಗೂ ರಾಜ್ಯ ಹೆದ್ದಾರಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯು ತುಂಬಾ ವಿಳಂಬದಿಂದ ನಡೆಯುತ್ತಿದ್ದು ಪಕ್ಕದಲ್ಲಿ ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಿರುವ ರಸ್ತೆಯು ತುಂಬಾ ಚಿಕ್ಕದಾಗಿದ್ದು ಹಾಗೂ ತೀರ ಹದಗೆಟ್ಟಿದ್ದು ವಾಹನ ಚಾಲಕರು ಹಾದು ಹೋಗಲು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಹರಸಹಾಸ ಪಡುತ್ತಿದ್ದರು ಹಾಗೂ ವಾಹನಗಳು ಬಹಳ ಅಡಚಣೆ ಉಂಟಾಗಿದೆ ಇನ್ನು ಈ ಮಾರ್ಗದಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ದರ್ಶನ ಪಡೆಯಲು ಸಾವಿರಾರು ಭಕ್ತಾದಿಗಳು ವಾಹನಗಳಲ್ಲಿ ಅತಿ ಹೆಚ್ಚಾಗಿ ಬರುವುದರಿಂದ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದರು. ಇನ್ನೂ ಬೈಕ್ ಸವಾರರಂದು ಎದ್ದು ಬಿದ್ದು ಚಲಿಸುವoತಾಗಿತ್ತು. ಎಚ್ಚರಿಕೆಯ ನಾಮಫಲಕವನ್ನು ಹಾಕದೆ ಇರುವುದು ರಾತ್ರಿ ಸಮಯದಲ್ಲಿ ಚಲಿಸುವ ವಾಹನಗಳಿಗೆ ಅಪಘಾತಕ್ಕೆ ಎಡೆ ಮಾಡಿಕೊಟ್ಟಿದೆ. ಎಂದು ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಇಲಾಖೆ ಹಾಗೂ ಗುತ್ತಿಗೆದಾರರು ಕಾರ್ಯಾನುಮುಖರಾಗಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕೆಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.