ಮುದ್ದೇಬಿಹಾಳ, ತಾಲೂಕಿನ ಹಿರೇಮುರಾಳ ಗ್ರಾಮದ ಸಮಾಜಸೇವಕರಾದ ಬಸನಗೌಡ ಪಾಟೀಲ (ಹಿರೇಮುರಾಳ) ಅವರು ಈಚೆಗೆ ಬೆಂಗಳೂರಿನ ಜೆಪಿ ಭವನದಲ್ಲಿ ಏರ್ಪಡಿಸಲಾದ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ – ವೆಂಕಟರಾವ್ ನಾಡಗೌಡ, ಪಕ್ಷದ ರಾಜ್ಯ ಕಾರ್ಯದರ್ಶಿ ತಿಪ್ಪಯ್ಯಸ್ವಾಮಿ ಹಾಗೂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷವನ್ನು – ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಇಂಡಿ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಬಿ.ಡಿ. ” ಪಾಟೀಲ,ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಸಿಂದಗಿ ಜೆಡಿಎಸ್ ಪಕ್ಷದ ತಾಲೂಕಾ ಅಧ್ಯಕ್ಷ ಎಂ.ಎನ್ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕಾಶಿನಕುಂಟಿ,ಮುತ್ತು ಮಾದಿನಾಳ,ಸಿದ್ದು ವಾಲಿಕಾರ, ಸೇರಿದಂತೆ ಉಪಸ್ಥಿತರಿದ್ದರು.