ಡಾ.ಬದರೀನಾಥ ಜಹಗೀರಾದಾರ ಅವರಿಗೆ ರಾಜ್ಯಮಟ್ಟದ ಜನ್ಮೋತ್ಸವ ಪ್ರಶಸ್ತಿ
ಮೈಸೂರು : ಯುವ ಸಾಹಿತಿ ಡಾ. ಬದರೀನಾಥ ಜಹಗೀರದಾರ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೀದರ ಘಟಕ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕ ಬಸವಕಲ್ಯಾಣ, ಅಭಿನವ ಪ್ರಕಾಶನ ಮತ್ತು ಪ್ರತಿಮಾ ಪ್ರಕಾಶನ ಜಂಟಿಯಾಗಿ ಕೊಡಮಾಡುವ ರಾಜ್ಯಮಟ್ಟದ ಜನ್ಮೋತ್ಸವ ಪ್ರಶಸ್ತಿ ಲಭಿಸಿದೆ.
ಅಭಿನವ ಪ್ರಕಾಶನ ಮತ್ತು ಪ್ರತಿಮಾ ಪ್ರಕಾಶನದ ಮುಖ್ಯಸ್ಥರಾದ ಶ್ರೀ ವೀರಶೆಟ್ಟಿ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಈಗಾಗಲೇ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಅವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಜನ್ಮೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.