ಇಂಡಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ
ನಮಸ್ಕಾರ… ನೀವು ನೋಡುತ್ತಿರುವುದು ವಾಯ್ಸ್ ಆಫ್ ಜನತಾ.
ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮೃತ ವಿದ್ಯಾರ್ಥಿಯನ್ನು ಇಂಡಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ನಿವಾಸಿ ಅಭಿಜಿತ್ ಭೀಮಪ್ಪ ಸಮಗಾರ ಎಂದು ಗುರುತಿಸಲಾಗಿದೆ. ಆತ್ ಇಂಡಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿಯುಸಿ ದ್ವೀತಿಯ ವರ್ಷದ ವಿದ್ಯಾರ್ಥಿಯಾಗಿದ್ದನು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ಅಭಿಜಿತ್ ತಮ್ಮ ಕುಟುಂಬದವರಿಗೆ ಒಂದು ಸಂದೇಶ ಕಳುಹಿಸಿದ್ದಾಗಿ ತಿಳಿದುಬಂದಿದೆ. ಬಳಿಕ ವಸತಿ ನಿಲಯದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆ ಪೂರ್ಣಗೊಂಡ ನಂತರವೇ ಸ್ಪಷ್ಟವಾಗಲಿದೆ.
ಈ ದುರ್ಘಟನೆ ವಿದ್ಯಾರ್ಥಿಯ ಕುಟುಂಬದವರಲ್ಲಿ ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಮತ್ತು ಆತಂಕವನ್ನುಂಟು ಮಾಡಿದೆ.
ಈ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುತ್ತಿದ್ದಂತೆ ವಾಯ್ಸ್ ಆಫ್ ಜನತಾ ಮೂಲಕ ನಿಮಗೆ ತಲುಪಿಸುತ್ತೇವೆ.


















