ಶಿಕ್ಷಕ ನಾರಾಯಣ್ “ಸರಸ್ವತಿ ಸಾಧಕ ಸಿರಿ “ರಾಷ್ಟ್ರಪ್ರಶಸ್ತಿಗೆ ಆಯ್ಕೆ, ಇಂದು ಪ್ರಶಸ್ತಿ ಸ್ವೀಕಾರ
ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ
ಹನೂರು : ಸರಸ್ವತಿ ಸಾಧಕ ಸಿರಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾದ ಚಾಮರಾಜನಗರ ಜಿಲ್ಲೆಯ ಸಿದ್ದಯ್ಯನಪುರ ಶಾಲೆಯ ಶಿಕ್ಷಕ ನಾರಾಯಣ್ ಆಯ್ಕೆಯಾಗಿ, ಪ್ರಶಸ್ತಿ ಸ್ವೀಕರಿಸಿದ್ದಾರೆ.
ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಾಲಿಗ್ರಾಮ, ದಾವಣಗೆರೆಯು ೭೦ನೇ ವರ್ಷದ ಕನ್ನಡ ನಿತ್ಯೋತ್ಸವದ ಅಂಗವಾಗಿ ನೀಡುವ ೨೦೨೫ನೇ ಸಾಲಿನ “ಸರಸ್ವತಿ ಸಾಧಕಸಿರಿ” ರಾಷ್ಟ್ರ ಪ್ರಶಸ್ತಿಗೆ ತಮ್ಮನ್ನು ಹೃದಯಪೂರ್ವಕವಾಗಿ ಆಯ್ಕೆಮಾಡಲಾಗಿದೆ ಇಂದು ಸಂಸ್ಥಾಪಕರಾದ ಗಣೇಶ್ ಶೆಣೈ,ಅಧ್ಯಕ್ಷರು ಡಾ. ನಾಗೇಶ್ ಕಿಣಿ ಹಾಗೂ ರಾಘವೇಂದ್ರ ಶೆಣೈ ತಿಳಿಸಿದ್ದಾರೆ.
ತಾವುಗಳು ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಜಾನಪದ, ಕ್ರೀಡೆ, ಸಮಾಜಸೇವೆ, ಸಂಘಟನೆ, ಶಿಕ್ಷಣ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ತಮ್ಮನ್ನು ಗುರುತಿಸಿ “ಸರಸ್ವತಿ ಸಾಧಕಸಿರಿ” ರಾಷ್ಟ್ರಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಿನಾಂಕ : ೨೭-೦೪-೨೦೨೫ ಭಾನುವಾರ ದಾವಣಗೆರೆ ರೈಲ್ವೇ ನಿಲ್ದಾಣದ ರಸ್ತೆಯಲ್ಲಿರುವ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ವಿಜೃಂಭಣೆಯಿಂದ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಗೆ ಭಾಜನರಾಗಿರುವ ತಮಗೆ ಸಂಸ್ಥೆಯ ಸರ್ವಸದಸ್ಯರು, ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಚಾಮರಾಜನಗರ ದ ಇತಿಹಾಸ ದಲ್ಲಿ ಇದೆ ಮೊದಲ ಬಾರಿ ರಾಷ್ಟ್ರ ಪ್ರಶಸ್ತಿ ಬಂದಿರೋದು ವನ್ನಿ ಕುಲ ಕ್ಷತ್ರಿಯ ಜನಾಂಗದಲ್ಲಿ ಹುಟ್ಟಿದಕ್ಕೂ ಸಾರ್ಥಕ ಕಾಂಚಳ್ಳಿ ಕೀರ್ತಿ ಹಾಗೂ ಶಾಲೆಯ ಕೀರ್ತಿ ತಂದ ನಿಮಗೆ ಕಾಂಚಳ್ಳಿ ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.
ನಿಮ್ಮೆಲ್ಲರ ಹಾರೈಕೆಗಳಿಂದ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿ ಇಂದು ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ಸನ್ಮಾನಿಸಲಾಯಿತು.
ಸನ್ಮಾನಿತರ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು:ನಾರಾಯಣ್ ದೈಹಿಕ ಶಿಕ್ಷಣ ಶಿಕ್ಷಕರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸಿದ್ದಯ್ಯನಪುರ ಚಾಮರಾಜನಗರ ತಾಲ್ಲೂಕು ಮತ್ತು ಶಿವ ಮಲ್ಲಯ್ಯ ದೈಹಿಕ ಶಿಕ್ಷಣ ಶಿಕ್ಷಕರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೆಂಪನಪುರ ಚಾಮರಾಜನಗರ ತಾಲ್ಲೂಕು ಮತ್ತು ಮಾದೇವ .ಜಿ . ದೈಹಿಕ ಶಿಕ್ಷಣ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯರಿಯೂರು ಯಳಂದೂರು ತಾಲ್ಲೂಕು ಚಾಮರಾಜನಗರ ಜಿಲ್ಲೆ.