ಕರಡಿ ದಾಳಿ ವ್ಯಕ್ತಿಯೋರ್ವನಿಗೆ ಗಂಭೀರ ಗಾಯ..ಆಗಿದ್ದು ಎಲ್ಲಿ..?
ಹನೂರು : ತಾಲೂಕಿನ ಕಾಡಂಚಿನ ಗ್ರಾಮವಾದ ಪೊನ್ನಾಚಿ ಗ್ರಾಮದಲ್ಲಿ ನಿಲ್ಲದ ಕಾಡುಪ್ರಾಣಿಗಳ ಹಾವಳಿ ಇಲ್ಲಿ ನಿರಂತರವಾಗಿ ಆನೆ ದಾಳಿ ನಡೆಯುತ್ತಿದ್ದು ರೈತರು ಕಂಗಲಾಗಿದ್ದಾರೆ. ಅದಾದ ನಂತರ ಚಿರತೆ ದಾಳಿಯಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡು ನಷ್ಟಕ್ಕೆ ತುತ್ತಾಗಿದ್ದು, ಭಾನುವಾರ ಪೊನ್ನಾಚಿ ಗ್ರಾಮದ ಸಮೀಪ ಸೀರ್ಗಟ್ಟಿ ಹತ್ತಿರ ತಮ್ಮ ಜಮೀನಿನಲ್ಲಿ ಬಸವಣ್ಣ (28) ಕೆಲಸ ಮಾಡಿಕೊಂಡಿರುವಾಗ ದಿಢೀರನೆ ಬಂದ ಕರಡಿ ದಾಳಿ ನಡೆಸಿದೆ ಎನ್ನಲಾಗಿದೆ. ಬಸವಣ್ಣ ಎಂಬುವವರ ಕಾಲಿಗೆ ಗಂಭೀರ ಗಾಯಗೊಂಡಿದ್ದು ಯಾವುದೇ ಪ್ರಾಣಪಾಯ ಆಗಿಲ್ಲ ಸದ್ಯಕ್ಕೆ ಘಟನೆಯಿಂದ ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದ್ದು.ಈ ಕಾಡು ಪ್ರಾಣಿಗಳಿಂದ ನಿರಂತರ ದಾಳಿಗೆ ತುತ್ತಾಗುತ್ತಿರುವ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ಸುದ್ದಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಗಾಯಾಳು ವನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಮುಂದಾದರೂ ಅರಣ್ಯ ಇಲಾಖೆಯವರು ಕಾಡು ಪ್ರಾಣಿಗಳ ಹಾವಳಿಯಿಂದ ಸಾರ್ವಜನಿಕರನ್ನು ಹೇಗೆ ಕಾಪಾಡುತ್ತಾರೆ ಎಂಬುದೇ ಯಕ್ಷಪ್ರಶ್ನೆಯಾಗಿದೆ..?
ವರದಿ : ಚೇತನ್ ಕುಮಾರ್ ಎಲ್, ತಾಲ್ಲೂಕು ಹನೂರು, ಚಾಮರಾಜನಗರ ಜಿಲ್ಲೆ..