ವಿಜಯಪುರ : ಚಲಿಸುತ್ತಿದ್ದ ಆಟೋದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆಟೋ ಭಸ್ಮವಾಗಿರುವ ಘಟನೆ ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ನಡೆದಿದೆ. ಇನ್ನೂ ಆಟೋದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದಂತೆ ಆಟೋದಲ್ಲಿ ಪ್ರಯಾಣಿಕರು, ಆಟೋ ಚಾಲಕ ಇಳಿದುಕೊಂಡು ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.