ಇಂಡಿ : ಪಕ್ಷೇತರ ಅಭ್ಯರ್ಥಿಯಾಗಿ ನಾನು ಮೂರು ಬಾರಿ ವಿಧಾನಸಭೆ ಚನಾವಣೆಯಲ್ಲಿ ಆಯ್ಕೆಯಾಗಿದ್ದೇನೆ. ಇಂಡಿ ಮತದಾರರ ಋುಣ ನನ್ನ ಮೇಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಇಂಡಿ ಮತಕ್ಷೇತ್ರದ ಕಣಕ್ಕೆ ಇಳಿಯುತ್ತೇನೆ ಎಂದು ಮಾಜಿ ಶಾಸಕ ರವಿಕಾಂತ ಪಾಟೀಲ್ ಹೇಳಿದರು.
ಇಂಡಿಯಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಯಲ್ಲಿ ಇಂಡಿ ಮತಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಈಗಾಗಲೇ ಸಿಎಂ ಬೊಮ್ಮಾಯಿ ಯವರು ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಒಂದು ವೇಳೆ ಬಿಜೆಪಿ ಟಿಕೆಟ್ ಸಿಗಲಿಲ್ಲ ಅಂದ್ರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದರು. ಇನ್ನು ಇಂಡಿಯ ಜನತೆ ಆಶೀರ್ವಾದ ನನ್ನ ಮೇಲೆ ಇದೆ. ಚುನಾವಣೆಯಲ್ಲಿ ಗೆಲುವು ಸಾಧಿಸುವ ಭರವಸೆ ಇದೆ ಎಂದರು.