• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಉತ್ತಮ ಫಸಲು ಪಡೆದಿದ್ದರೂ ರೈತರ ಮುಖದಲ್ಲಿ ಕಳೆಗುಂದಿದ ಸಂತಸ:

      January 21, 2022
      0
      ಉತ್ತಮ ಫಸಲು ಪಡೆದಿದ್ದರೂ ರೈತರ ಮುಖದಲ್ಲಿ ಕಳೆಗುಂದಿದ ಸಂತಸ:
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಜಿಲ್ಲೆಯಾದ್ಯಂತ ರೈತರು ಹಿಂಗಾರಿನಲ್ಲಿ ಬೆಳೆದಿರುವ ಜೋಳ, ಸಜ್ಜೆ ಹಾಗೂ ಕಡಲೆ ಫಸಲು ಉತ್ತಮವಾಗಿ ಬಂದಿದೆ. ಸಂತಸದಿಂದಲೇ ಬೆಳೆ ಕಟಾವು ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ ಆದರೆ ರೈತರಲ್ಲಿ ಮಾತ್ರ ಯಾವುದೇ ಉತ್ಸಾಹ ಹುಮ್ಮಸ್ಸು ಕಾಣುತ್ತಿಲ್ಲ.

      ಹೌದು ರಾಯಚೂರು ಜಿಲ್ಲೆಯಾದ್ಯಂತ ಹಿಂಗಾರು ಬೆಳೆಗಳನ್ನು ರೈತರು ಬೆಳೆದಿದ್ದಾರೆ. ಕೆಲವರು ಜೋಳ, ಸಜ್ಜೆ ಕಟಾವು ಮಾಡಿದ್ದು, ಉತ್ತಮ ಫಸಲು ಕೈ ಸೇರಿದೆ. ಆದರೆ ಮಾರಾಟ ಮಾಡಲು ನಿರೀಕ್ಷಿತ ಪ್ರಮಾಣದಲ್ಲಿ ದರವಿಲ್ಲದೆ ನಿರಾಸೆ ಅನುಭವಿಸುವಂತಾಗಿದೆ. ಕನಿಷ್ಠ ಬೆಂಬಲ ಬೆಲೆ ಎಂಎಸ್‌ಪಿಗೆ ಮಾರಾಟ ಮಾಡುವುದಕ್ಕೆ ರೈತರು ನೋಂದಣಿ ಮಾಡಿಕೊಂಡಿದ್ದರೂ ಖರೀದಿ ಇನ್ನೂ ಆರಂಭವಾಗಿಲ್ಲ. ಈಗಾಗಲೆ ಸರಕಾರ ಖರೀದಿಯನ್ನು ನಿಗದಿತ ಪ್ರಮಾಣದಲ್ಲಿ ಮಾತ್ರ ಖರೀದಿಸಲಾಗುವುದು ಎಂದು ತಿಳಿಸಿದೆ. ಹಿಗಾಗಿ ರೈತರಿಗೆ ಕೈಸೇರಿದ ಬೆಳೆ ಉತ್ತಮ ಬೆಲೆಗೆ ಮಾರಾಟವಾಗದ ಬೇಸರ ಮುಖದಲ್ಲಿ ಎದ್ದು ಕಾಣುತ್ತಿದ್ದು, ಕಟಾವು ಮಾಡದ ರೈತರ ಮುಖದಲ್ಲಿ ಕಳೆ ಗುಂದಲು ಇದೆ ಕಾರಣವಾಗಿದೆ.

      ಹೀಗಾಗಿ ಕಟಾವು ಮಾಡದ ರೈತರು ಮುಂದಿನ ದಿನಗಳಲ್ಲಿಯಾದರೂ ದರ ಏರಿಕೆಯಾಗಬಹುದು ಎಂದು ಕಾಯುತ್ತಿದ್ದಾರೆ. ಇನ್ನೂ ಖರೀದಿ ಕೇಂದ್ರಗಳಲ್ಲಿ ಒಬ್ಬ ರೈತರಿಂದ ಜೋಳ ಗರಿಷ್ಠ 20 ಕ್ವಿಂಟಲ್ ಖರೀದಿಸಲಾಗುತ್ತಿದ್ದು, ಬಿಳಿಜೋಳ-ಹೈಬ್ರೀಡ್‌ಗೆ ಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ ₹2,738 ಹಾಗೂ ಬಿಳಿಜೋಳ-ಮಾಲ್ದಂಡಿಗೆ ಪ್ರತಿ ಕ್ವಿಂಟಲ್‌ಗೆ ₹2,758 ಗಳಂತೆ ದರ ನಿಗದಿ ಮಾಡಲಾಗಿದೆ. ಕೆಲವೆಡೆ ಜೋಳ ಖರೀದಿ ಆರಂಭಿಸಲಾಗಿದೆ ಎಂದು ಹೇಳಿದ್ದರೂ, ಅಧಿಕೃತವಾಗಿ ಇನ್ನೂ ಖರೀದಿ ಆರಂಭವಾಗಿಲ್ಲ. ಫೆಬ್ರವರಿ ಆರಂಭವಾಗುತ್ತಿದ್ದಂತೆ ಜೋಳ ಮತ್ತು ಕಡಲೆ ಕೊಯ್ಲು ವ್ಯಾಪಕವಾಗಿ ಪ್ರಾರಂಭವಾಗುವ ನಿರೀಕ್ಷೆ ಇದೆ. ಹಾಗಾಗಿ ಸರಕಾರ ಇತ್ತ ಗಮನ ಹರಿಸಿ ಖರೀದಿಯಲ್ಲಿ ಒಂದಷ್ಟು ಬದಲಾವಣೆ ಮಾಡುವ ಮೂಲಕ ಹೆಚ್ಚಿನ ಜೋಳ ಖರೀದಿಗೆ ಮುಂದಾಗಬೇಕಿದೆ.

      ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆಯು 91 ಸಾವಿರ ಹೆಕ್ಟೇರ್‌ ಜೋಳ ಬಿತ್ತನೆ ಗುರಿ ಹೊಂದಿದ್ದರೂ 71,019 ಹೆಕ್ಟೇರ್‌ನಲ್ಲಿ ಬಿತ್ತನೆ ಸಾಧನೆಯಾಗಿದೆ. ಕಡಲೆ ಬಿತ್ತನೆ ಗುರಿ 1,12,037 ಹೆಕ್ಟೇರ್‌ ಬಿತ್ತನೆ ಇದ್ದರೂ, ಗುರಿ ಮೀರಿ 2,16,690 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಒಣ ಬೇಸಾಯ ಹೆಚ್ಚಿನ ಪ್ರಮಾಣದಲ್ಲಿರುವ ಲಿಂಗಸುಗೂರು ಹಾಗೂ ಮಸ್ಕಿ ತಾಲ್ಲೂಕುಗಳಲ್ಲಿ ಈ ಸಲ ವ್ಯಾಪಕವಾಗಿ ಕಡಲೆ ಬಿತ್ತನೆಯಾಗಿದೆ. ಲಿಂಗಸುಗೂರು ತಾಲ್ಲೂಕಿನಲ್ಲಿ 50,400 ಕಡಲೆ ಬಿತ್ತನೆ ಗುರಿ ಇತ್ತು, 46,204 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಬಿತ್ತನೆಯಾದ ಬೆಳೆಗಳು ಉತ್ತಮ ಫಸಲನ್ನು ನೀಡಿವೆ. ಮಸ್ಕಿ ತಾಲ್ಲೂಕಿನಲ್ಲಿ 20,487 ಹೆಕ್ಟೇರ್‌ ಕಡಲೆ ಬಿತ್ತನೆಯಾಗುವ ಗುರಿ ಇತ್ತು. ಆದರೆ, 34,196 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಕಾಲುವೆ ನೀರು ಸಮರ್ಪಕವಾಗಿ ದೊರೆಯದ ಭಾಗದಲ್ಲಿರುವ ಬಹುತೇಕ ರೈತರು ಕಡಲೆ ಬೆಳೆದಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಹತ್ತಿ ಬೆಳೆದಿದ್ದ ರೈತರ ಪೈಕಿ ಕೆಲವರು ಇನ್ನೂ ಜಮೀನು ಖಾಲಿ ಮಾಡಿಕೊಂಡಿಲ್ಲ. ಭತ್ತ ಬೆಳೆದು ಕಟಾವು ಮಾಡಿಕೊಂಡಿದ್ದವರು ಹಾಗೂ ನಷ್ಟ ಅನುಭವಿಸಿದ ರೈತರು ಎರಡನೇ ಬೆಳೆಗೆ ಭತ್ತವನ್ನೇ ಬೆಳೆಯುತ್ತಿದ್ದಾರೆ.
      ಕಾಲುವೆ ನೀರು ಸಮರ್ಪಕವಾಗಿ ಲಭ್ಯವಿರುವ ರೈತರು ಮಾತ್ರ ಭತ್ತದ ಮೊರೆ ಹೋಗಿದ್ದಾರೆ. ಇನ್ನುಳಿದಂತೆ ಹತ್ತಿ ಬೆಳೆದಿರುವ ರೈತರು ಈ ವರ್ಷ ಉತ್ತಮ ಲಾಭ ಪಡೆದುಕೊಂಡು ಸಂತುಷ್ಟವಾಗಿದ್ದಾರೆ. ಆದರೆ ಹಿಂಗಾರು ರೈತರು ಮತ್ತು ಬೆಲೆ ಸಿಗದೆ ನಷ್ಟ ಅನುಭವಿಸುವ ಭಯ ಕಾಡುತ್ತಿದೆ.

      ಅದೇನೆ ಇದ್ದರೂ ಸರ್ಕಾರ ಇತ್ತು ಗಮನ ಹರಿಸುವ ಮೂಲಕ ರೈತರಿಗೆ ಮುಂದಿನ ದಿನಗಳಲ್ಲಿ ಆರಂಭವಾಗಲಿರುವ ಖರೀದಿ ಕೇಂದ್ರಗಳಲ್ಲಿ ಕೊಂಚ ಬದಲಾವಣೆ ಮಾಡುವ ಮೂಲಕ ಹೆಚ್ಚಿನ ಜೋಳ ಕಡಲೆ ಖರೀದಿ ಮಾಡಿ ಉತ್ತಮ ಬೆಲೆ ನೀಡುವ ಮೂಲಕ ರೈತರಿಗೆ ಧೈರ್ಯ ತುಂಬುವ ಕೆಲಸದ ಜೊತೆ ಪ್ರೋತ್ಸಾಹ ನೀಡಬೇಕಿದೆ.

      Tags: hingari hangamajola kharidi kendraRaichurraitaru
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.