ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರ ವಲಯದಲ್ಲಿ ಯುವಕನೋರ್ವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಜಯಸಿಂಗ್ (25) ಎನ್ನುವ ಯುವಕ ನೇಣಿಗೆ ಶರಣಾಗಿದ್ದಾನೆ. ಸುಮಾರು ವರ್ಷಗಳ ಹಿಂದೆ ಜಯಸಿಂಗನ ಕುಟುಂಬದವರು ಮುದಗಲ್ ಪಟ್ಟಣಕ್ಕೆ ದುಡಿಯಲು ಬಂದಿದ್ದರು. ಯುವಕ ಮೂರು ದಿನಗಳ ಹಿಂದೆ ತನ್ನ ಸಹೋದರಿಯನ್ನು ಮಾತನಾಡಿಸಲು ಬಂದಿದ್ದ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜಯಸಿಂಗ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.