• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಒಂದು ಕಾಲದಲ್ಲಿ ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಮಲೆನಾಡಿನ ಅನುಭವವಾಗುತ್ತಿದೆ

      voiceofjanata.in

      December 21, 2025
      0
      ಒಂದು ಕಾಲದಲ್ಲಿ ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಮಲೆನಾಡಿನ ಅನುಭವವಾಗುತ್ತಿದೆ
      0
      SHARES
      63
      VIEWS
      Share on FacebookShare on TwitterShare on whatsappShare on telegramShare on Mail

      ಒಂದು ಕಾಲದಲ್ಲಿ ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಮಲೆನಾಡಿನ ಅನುಭವವಾಗುತ್ತಿದೆ

      ವಿಜಯಪುರ: ದೇಶದಲ್ಲಿ ವೈದ್ಯಕೀಯ ಸೇವೆ ಹೊಸ ಮಜಲನ್ನು ತಲುಪಿದ್ದು, ರೋಗಗಳಿಗೆ ಗುಣಮಟ್ಟದ ಸೇವೆ ತಲುಪಿಸಲು ಅತ್ಯಾಧುನಿಕ ತಂತ್ರಜ್ಞಾನ ಸದ್ಬಳಕೆಯಾಗುತ್ತಿದೆ ಎಂದು ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ ಹೇಳಿದ್ದಾರೆ.

      ಶುಕ್ರವಾರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಅವರು ಘಟಿಕೋತ್ಸವ ಭಾಷಣ ಮಾಡಿದರು.

      ಒಂದು ಕಾಲದಲ್ಲಿ ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಮಲೆನಾಡಿನ ಅನುಭವವಾಗುತ್ತಿದೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಆವರಣ ಹಚ್ಚು ಹಸಿರಿನಿಂದ ಕೂಡಿದ್ದು, ವಿದ್ಯಾಭ್ಯಾಸಕ್ಕೆ ಹೇಳಿ ಮಾಡಿಸಿದಂತಿದೆ. ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಈಗ ವೃತ್ತಿ ಜೀವನದ ಹೊಸದೊಂದು ಅಧ್ಯಾಯ ಪ್ರಾರಂಭವಾಗಿದೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಇನ್ನೂ ಹೆಚ್ಚಾಗಿ ಅಧ್ಯಯನ ನಿರತರಾಗಬೇಕು. ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ಯುವವೈದ್ಯರು ಸಹಾನುಭೂತಿ ಮತ್ತು ಕರುಣೆಯಿಂದ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳು ನಿರಂತರವಾಗಿರಬೇಕು ಎಂದು ಅವರು ಹೇಳಿದರು.

      ದೇಶದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂಟರ್ನೆಟ್ ಸುಧಾರಣೆಯಿಂದಾಗಿ ರೋಗಿಗಳನ್ನು ದೂರದಿಂದಲೇ ಟೆಲಿಮೆಡಿಸೀನ್ ಮೂಲಕ ಚಿಕಿತ್ಸೆ ನೀಡಬಹುದಾಗಿದೆ. ಡಿಜಿಟಲ್ ವೇದಿಕೆಗಳು ರೋಗಿಗಳು ವೈದ್ಯರನ್ನು ಸುಲಭವಾಗಿ ತಲುಪಲು ನೆರವಾಗಿವೆ. ಕೃತಕ ಬುದ್ದಮತ್ತೆ(ಆರ್ಟಿಫಿಸಿಯಲ್ ಇಂಟಲಿಜೆನ್ಸ್) ಬಳಕೆಯಿಂದಾಗಿ ರೋಗಗಳ ಗುಣಲಕ್ಷಣಗಳನ್ನು ನಿಖರವಾಗಿ ಗುರುತಿಸಿ ಚಿಕಿತ್ಸೆ ನೀಡಲು ನೆರವಾಗಿವೆ. ರೊಬೊಟಿಕ್ ತಂತ್ರಜ್ಞಾನ ಸರಳ, ಸುಲಭ, ಕಡಿಮೆ ವೆಚ್ಚ ಮತ್ತು ಹೆಚ್ಚು ಗಾಯವಿಲ್ಲದೇ ಶಸ್ತ್ರಚಿಕಿತ್ಸೆ ನಡೆಸಲು ವರದಾನವಾಗಿದೆ. ಜಿನೊಮಿಕ್ಸ್ ಮತ್ತು ಪ್ರಿಸೀಶನ್ ಮೆಡಿಸೀನ್ ತಂತ್ರಜ್ಞಾನ, ನ್ಯಾನೊಟೆಕ್ನಾಲಜಿ, ರಿಜನರೇಟಿವ್ ಮೆಡಿಸೀನ್ ಮತ್ತು ಸ್ಟಮ್ ಸೆಲ್ ಥೆರಪಿ, ಹೆಲ್ತ್ ಕೇರ್ ಡಾಟಾ ವಿಶ್ಲೇಷಣೆ, ಮೆಡಿಕಲ್ ಡಿವೈಸಿಸ್ ಮತ್ತು ವಿಯರೇಬಲ್ ಟೆಕ್ನಾಲಜಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗಗಳ ತ್ವರಿತ ಪತ್ತೆ, ಚಿಕಿತ್ಸೆ ಮತ್ತು ರೋಗಗಳಿಂದ ಗುಣಮಖರಾಗಲು ಅನುಕೂಲ ಒದಗಿಸಿವೆ. ಹೀಗಾಗಿ ಯುವ ವೈದ್ಯರು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ನೆರವಾಗಬೇಕು. ಮೊಬೈಲ್ ಮತ್ತು ಅಂತರ್ಜಾಲ ಬಳಕೆ ಗೀಳಿನಿಂದ ಹೊರ ಬರಬೇಕು. ತಂತ್ರಜ್ಞಾನದ ಸದ್ಭಳಕೆಯಾಗಬೇಕು. ವೈದ್ಯರು ಸಂಶೋಧನೆ ನಿರತರಾಗಿ ವೃತ್ತಿ ನೈಪುಣ್ಯತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಅವರು ಹೇಳಿದರು.

      ವಿವಿ ಪ್ರಭಾರ ಕುಲಪತಿ ಡಾ. ಅರುಣ ಚಂ. ಇನಾಮದಾರ ವಾರ್ಷಿಕ ವರದಿ ಮಂಡಿಸಿದರು. ಕಳೆದ ಒಂದು ವರ್ಷದಲ್ಲಿ ವಿವಿಯಲ್ಲಿ ನಡೆದ ಸಂಶೋಧನೆಗಳು, ಲಭಿಸಿದ ಮಾನ್ಯತೆಗಳು, ಸಿಕ್ಕ ಪುರಸ್ಕಾರಗಳು, ಮಾನ್ಯತೆಗಳು, ವೈದ್ಯರ ಸಾಧನೆಗಳು, ಮಾಡಿಕೊಳ್ಳಲಾದ ಹೊಸ ಒಡಂಬಡಿಕೆಗಳು, ಮುಂದೆ ಕೈಗೊಳ್ಳಲಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದರು.

      ಡೀಮ್ಡ್ ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ ಘಟಿಕೋತ್ಸವದ ಪದವಿ ಪ್ರಧಾನ ಮಾಡಿದರು.
      ಈ ಘಟಿಕೋತ್ಸವದಲ್ಲಿ ಒಟ್ಟು 502 ಪದವಿ ಪ್ರಧಾನ ಮಾಡಲಾಯಿತು. ಅವುಗಳಲ್ಲಿ 11 ಪಿ.ಎಚ್.ಡಿ., 3 ಎಂ.ಸಿಎಚ್(ಯುರಾಲಜಿ), 2 ಡಿ.ಎಂ. (ಕಾರ್ಡಿಯಾಲಜಿ), 239 ವೈದ್ಯಕೀಯ ಸ್ನಾತಕೋತ್ತರ ಪದವಿಗಳು, 3 ಫೆಲೋಶಿಪ್ಗಳು, 156 ಎಂಬಿಬಿಎಸ್ ಪದವಿಗಳು, 10 ಸ್ನಾತಕೋತ್ತರ ಅಲೈಡ್ ಹೆಲ್ತ್ ಪದವಿಗಳು, 19 ವಿಜ್ಞಾನ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿಗಳು ಮತ್ತು 13 ಬ್ಯಾಚುಲರ್ ಆಫ್ ಫಿಸಿಯೋಥೆರಪಿ 46 ಅಲೈಡ್ ವಿಜ್ಞಾನ ಪದವಿಗಳು ಸೇರಿವೆ.

      ಇದೇ ವೇಳೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ 28 ಚಿನ್ನದ ಪದಕಗಳು ಮತ್ತು 3 ನಗದು ಬಹುಮಾನಗಳನ್ನು ಪ್ರದಾನ ಮಾಡಲಾಯಿತು. ವೈದ್ಯಕೀಯ ಸ್ನಾತಕೋತ್ತರ ವಿಭಾಗದಲ್ಲಿ ಡಾ. ನರ್ಲಾ ಸುರೇಖಾ ಮತ್ತು ಡಾ. ಶಂಕರ್ ನಾರಾಯಣನ್ ಆರ್ ತಲಾ ಎರಡು ಚಿನ್ನದ ಪದಕಗಳನ್ನು ಪಡೆದರೆ, ಪದವಿ ವೈದ್ಯಕೀಯ ವಿಭಾಗದಲ್ಲಿ ಡಾ. ಯಶ ಆರ್ಯ ಐದು ಚಿನ್ನದ ಪದಕ ಮತ್ತು ಒಂದು ನಗದು ಬಹುಮಾನ, ಡಾ. ನಿಶ್ಚಿತಾ ಸಿ. ರಾಜ ಮೂರು ಚಿನ್ನದ ಪದಕ ಮತ್ತು ಒಂದು ನಗದು ಬಹುಮಾನ, ಡಾ. ಸಲೋನಿ ವರ್ಮಾ ಎರಡು ಚಿನ್ನದ ಪದಕ ಮತ್ತು ಒಂದು ನಗದು ಬಹುಮಾನ, ಡಾ. ಶಿರೀಷಾ ಎಂ. ಎಸ್. ಎರಡು ಚಿನ್ನದ ಪದಕಗಳನ್ನು ಪಡೆದರು.

      ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ವ್ಯಾಪ್ತಿಯಲ್ಲಿರುವ ನಾನಾ ಅಂಗ ಸಂಸ್ಥೆಗಳ ಮತ್ತು ಅವುಗಳ ಸಾಧನೆಗಳನ್ನು ವಿವರಿಸಿದರು.

      ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ, ಡೀಮ್ಡ್ ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಪರೀಕ್ಷೆ ನಿಯಂತ್ರಕ ಡಾ. ಶಶಿಧರ ದೇವರಮನಿ, ವೈದ್ಯಕೀಯ ವಿಭಾಗದ ಡೀನ್ ಡಾ. ತೇಜಸ್ವಿನಿ ವಲ್ಲಭ, ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಸೈನ್ಸ್ ಮತ್ತು ಟೆಕ್ನಾಲಜಿ ವಿಭಾಗದ ಡೀನ್ ಡಾ. ಎಸ್. ವಿ. ಪಾಟೀಲ ಹಾಗೂ ಕಾನೂನು ವಿಭಾಗದ ಡೀನ್ ಡಾ. ರಘುವೀರ್ ಜಿ. ಕುಲಕರ್ಣಿ, ಡಾ. ಸಚ್ಚಿದಾನಂದ, ಡಾ. ಶ್ರೀನಿವಾಸ ಬಳ್ಳಿ, ಡಾ. ಸ್ನೇಹಾ ಜವಳಕರ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಅಶೋಕ ವಾರದ, ಡಾ.ಶ್ರೀಶೈಲ ಗುಡಗಂಟಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

      ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸ್ವಾಗತಿಸಿದರು. ಡಾ. ಚಂದ್ರಿಕಾ ದೊಡಿಹಾಳ, ಡಾ. ಆರ್. ವಿ. ಕುಲಕರ್ಣಿ, ಡಾ. ಎಂ. ಎಂ. ಪಾಟೀಲ ಪರಿಚಯಿಸಿದರು.ಡಾ. ತನುಜಾ ಪಟ್ಟಣಕರ, ಡಾ. ವೀಣಾ ಹರವಾಳಕರ ಹಾಗೂ ಡಾ. ಸ್ಮೀತಾ ಮಂಗಳಗಿರಿ ನಿರೂಪಿಸಿದರು.

       

      1 And 2 BLDE Deemed To Be University Convocation: ವಿಜಯಪುರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಡಾ. ಯಶ ಆರ್ಯ ಅವರಿಗೆ ಐದು ಚಿನ್ನದ ಪದಕ ಮತ್ತು ಒಂದು ನಗದು ಪರಸ್ಕಾರ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ, ಸಚಿವ ಎಂ. ಬಿ. ಪಾಟೀಲ, ಡೀಮ್ಡ್ ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ, ಡಾ. ವೈ. ಎಂ. ಜಯರಾಜ, ಡಾ, ಅರುಣ ಚಂ. ಇನಾಮದಾರ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura district#Voice Of Janata#VOICE OF JANATA (VOJ-VOJ)#Voiceofjanata.in#ಒಂದು ಕಾಲದಲ್ಲಿ ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಮಲೆನಾಡಿನ ಅನುಭವವಾಗುತ್ತಿದೆ.is now experiencing the mountain experienceonce known for drought
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.