ರಾಯಚೂರು : ಮಾನವಿ ತಾಲೂಕಿನ ಜಾನೇಕಲ್ ಹಾಗೂ ಪೋತ್ನಾಳ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನುಷ್ಠಾನಗೊಂಡಿರುವ ಕಾಮಗಾರಿಗಳು ಹಾಗೂ ಆಧಾರ ಜೋಡಣೆ ಪ್ರಗತಿಗೆ ಸಂಬಂದಿಸಿದಂತೆ ಮಾನ್ಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ (ಡಿ.ಆರ್.ಡಿ.ಎ) ಮಡೋಳಪ್ಪ ಪಿ.ಎಸ್ ರವರು ಗ್ರಾಪಂಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಾನೇಕಲ್ ಗ್ರಾಪಂ ಕಛೇರಿಗೆ ಬೇಟಿ ನೀಡಿ ಕೂಲಿ ಕಾರ್ಮಿಕರ ಅಧಾರ ಜೋಡಣೆ ಅತ್ಯಂತ ಕಡಿಮೆ ಪ್ರಗತಿ ಇರುವುದರಿಂದ ಸಬಂಧ ಪಟ್ಟ ಅಧಿಕಾರಿ/ಸಿಬ್ಬಂದಿಗಳು ಮನೆ-ಮನೆಗೆ ಬೇಟಿ ನೀಡಿ ಮಾಹಿತಿ ಸಂಗ್ರಹಿಸಿ ಆನ್-ಲ್ಯೆನ ನಲ್ಲಿ ಅಪಡೇಟ್ ಮಾಡಲು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಿಳಿಸಿದರು.
ತದನಂತರ ಪೋತ್ನಾಳ ಗ್ರಾಮ ಪಂಚಾಯತಿಗೆ ಬೇಟಿ ನೀಡಿ ಆಧಾರ ಜೋಡಣೆ ಪ್ರಗತಿಯ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಸದರಿ ಗ್ರಾಪಂಯ ಸಿಬ್ಬಂದಿಗಳು ಇನ್ನೂ ಎರಡು ದಿನಗಳಲ್ಲಿ ಮನೆ ಮನೆ ಭೇಟಿ ನೀಡಿ ಆಧಾರ ಕಾರ್ಡ್ ಮಾಹಿತಿಯನ್ನು ಸಂಗ್ರಹಿಸಿ ಆನ್-ಲೈನ್ ಅಪಡೇಟ್ ಮಾಡಲು ಹಾಗೂ ಹೆಚ್ಚಿನ ಪ್ರಗತಿ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇನ್ನೂ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳಾದ ಮಳೆ ನೀರು ಕೋಯ್ಲಿ, ಬಿಸಿಯೂಟದ ಅಡುಗೆ ಕೋಣೆ, ಚರಂಡಿ ನಿರ್ಮಾಣ, ಘನ ತ್ಯಾಜ್ಯ ವಿಲೇವಾರಿ ಘಟಕ, ಶಾಲಾ ಶೌಚಾಲಯ ಹಾಗೂ ಬಾಸ್ಕೇಟ್ ಬಾಲ್ ಕೋರ್ಟ್ ಕಾಮಗಾರಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಮಾಡುವಂತೆ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಂತ್ರಿಕ ಸಂಯೋಜಕರು ಗ್ರಾಪಂ ಸಿಬ್ಬಂದಿ ವರ್ಗದವರು ಇದ್ದರು.