ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ
ವಿಜಯಪುರ: ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಡಾ.ಸೀತವ್ವ ಜೋಡಟ್ಟಿ ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿವಿಧ ನಿಕಾಯಗಳ ಸಹಯೋಗದಲ್ಲಿ ಅಂತಾರಾಷ್ಟಿಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೬” ಉದ್ಘಾಟಿಸಿ ಮಾತನಾಡಿದರು.ಮಹಿಳೆಯರು ಅಬಲೆಯಲ್ಲ ಸಬಲರು. ತೊಟ್ಟಿಲು ತೂಗುವ ಕೈ ದೇಶವನ್ನು ಆಳುತ್ತದೆ. ಇದಕ್ಕೆ ರಾಷ್ಟçಪತಿ ಮುರ್ಮು ಅವರು ನಿದರ್ಶನ. ಮಹಿಳೆಯರ ಸಬಲೀಕರಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ ಅವರ ಶಿಕ್ಷಣ, ಸಂಘಟನೆ, ಹೋರಾಟ ಈ ಸಂದೇಶಗಳೆ ಮೂಲ ಮಂತ್ರಗಳಾಗಿವೆ ಎಂದು ಅವರು ನುಡಿದರು.
ದೇವದಾಸಿ ಪದ್ಧತಿ ನಿಲ್ಲಿಸಿ ದೇವದಾಸಿಯರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಾಸ್ ಸಂಸ್ಥೆ ೨೯ ವರ್ಷಗಳನ್ನು ಪೂರೈಸಿದೆ. ದೇವದಾಸಿಯರು ಮನೆಯಲ್ಲಿ ಆಸ್ತಿ ಕೇಳಿದಾಗ ಹಲವಾರು ಎಡರು ತೊಡರುಗಳು ಬಂದವು. ಆಗ ನಾವೂ ಸಂಸ್ಥೆಯಲ್ಲಿ ಕಾನೂನು ಕೋಶ ಆರಂಭಿಸಿದೆವು. ದೇವದಾಸಿ ಮಹಿಳಿಯರಿಗೆ ಮಾಶಾಸನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದೆವು. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಮಾಶಾಸನ ಮಂಜೂರು ಮಾಡಿದರು. ಈ ಎಲ್ಲ ಶ್ರೇಯಸ್ಸು ಮಾಸ್ ಸಂಸ್ಥೆಗೆ ಸೇರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಮಾತನಾಡಿ, ಮಹಿಳೆಯರು ಇಂದು ಪ್ರತಿಯೊಂದು ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಮಹಿಳೆ ಕೇವಲ ಮನೆಯನ್ನು ನಿರ್ವಹಿಸುವುದು ಅಷ್ಟೇ ಅಲ್ಲದೆ ಉದ್ಯೋಗ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾಳೆ. ಮಹಿಳೆಯರು ಸ್ಪಷ್ಟವಾದ ಗುರಿಗಳನ್ನು ಹೊಂದಬೇಕು. ಅದಕ್ಕಾಗಿ ಸತತ ಪರಿಶ್ರಮ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯೆ ಮಮತಾ ಎಸ್ ಮಾತನಾಡಿ, ಮಹಿಳೆಯರು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಬಲಿಷ್ಠ ರಾಷ್ಟçವನ್ನು ಕಟ್ಟಲು ಸಾಧ್ಯ. ಕೇವಲ ಒಬ್ಬರೇ ಬೆಳೆಯುವುದು ಅಲ್ಲಾ ನಮ್ಮ ಜೊತೆಯಲ್ಲಿ ಇರುವವರನ್ನು ಬೆಳೆಸಿದಾಗ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ. ಜೀವನದಲ್ಲಿ ತಂದೆ ತಾಯಿಗಳ ಸ್ಥಾನ ಮಹತ್ವದಾಗಿದೆ. ಅವರಿಗೆ ಗೌರವವಿಸುವುದು ನಮ್ಮ ಕರ್ತವ್ಯವಾಗಿದೆ. ಉತ್ತಮ ಆರೋಗ್ಯ ಮತ್ತು ಮನಸ್ಥಿತಿಯನ್ನು ಹೊಂದಿ ಪ್ರಗತಿ ಹೊಂದಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಆಶಯಗಳನ್ನು ಅನುಷ್ಠಾನಗೊಳಿಸಲು ನಾವೆಲ್ಲರೂ ಇಂದು ಸಂಕಲ್ಪ ಮಾಡಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಡಾ.ಶಶಿಕಲಾ ರಾಠೋಡ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ವಿವಿಯ ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಮುನ್ನ ಅತಿಥಿಯರನ್ನು ಮೆರವಣಿಗೆಯ ಮೂಲಕ ವೇದಿಕೆಗೆ ಕರೆತರಲಾಯಿತು.
ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ, ಸಂವಿಧಾನ ಪ್ರಸ್ತಾವನೆ ಓದಿಸಿದರು. ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಗೂ ಹೋರಾಟ ಗೀತೆ ಹಾಡಿದರು. ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ.ಲಕ್ಷಿö್ಮÃದೇವಿ ವೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೊ.ಶಾಂತಾದೇವಿ ಟಿ. ಸ್ವಾಗತಿಸಿದರು, ಡಾ.ತಹಮೀನಾ ಕೋಲಾರ, ಡಾ.ಕಲಾವತಿ ಕಾಂಬಳೆ ಮತ್ತು ಪ್ರೊ.ಜ್ಯೋತಿ ಉಪಾದ್ಯೆ ಅತಿಥಿಯರನ್ನು ಪರಿಚಯಿಸಿದರು. ರುಕ್ಮವ್ವ ಅಗಸರ ವಂದಿಸಿದರು, ಪ್ರೊ.ರಾಜು ಬಾಗಲಕೋಟೆ ನಿರೂಪಿಸಿದರು.



















