• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಿಶ್ವ ವಿಕಲಚೇತನರ ದಿನಾಚರಣೆ-2024 ಆತ್ಮವಿಶ್ವಾಸದಿಂದ ಮುನ್ನಡೆದು ಸಾಧನೆಗೈಯ್ಯುವಂತೆ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ

      Voiceofjanata.in

      December 3, 2024
      0
      ವಿಶ್ವ ವಿಕಲಚೇತನರ ದಿನಾಚರಣೆ-2024 ಆತ್ಮವಿಶ್ವಾಸದಿಂದ ಮುನ್ನಡೆದು ಸಾಧನೆಗೈಯ್ಯುವಂತೆ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ
      0
      SHARES
      136
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ವಿಕಲಚೇತನರ ದಿನಾಚರಣೆ-2024
      ಆತ್ಮವಿಶ್ವಾಸದಿಂದ ಮುನ್ನಡೆದು ಸಾಧನೆಗೈಯ್ಯುವಂತೆ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ

       

      ವಿಜಯಪುರ, ಡಿಸೆಂಬರ್ 03 : ಜೀವನದಲ್ಲಿ ಸಾಧನೆ ಮಾಡಲು ಮನಸ್ಸು ಮುಖ್ಯ, ಮನಸ್ಸಿದ್ದಲ್ಲಿ ಮಾರ್ಗ ಎಂಬಂತೆ ವಿಶೇಷ ಚೇತನರು ಒಂದು ವಿಶೇಷ ಸದೃಢ ಮನಸ್ಸು ಹೊಂದಿರುತ್ತಾರೆ. ಸಾಧನೆಗೆ ಯಾವುದೂ ಅಡ್ಡಿಯಾಗಲಾರದು. ಆತ್ಮವಿಶ್ವಾಸದಿಂದ ಎಂತಹ ಸನ್ನಿವೇಶ-ಸಂದರ್ಭವನ್ನು ಛಲದಿಂದ ಎದುರಿಸಿ ಸಾಧನೆಗೆ ಮುಂದಾಗುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಸಾಧನೆ ಸಾಧಕನ ಸೊತ್ತು. ದೃಢ ಮನಸ್ಸು ಹೊಂದಿ, ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗಬೇಕು ಎಂದು ಅವರು ಹೇಳಿದರು.

       

      ಜೀವನದಲ್ಲಿ ಆಶಾಭಾವನೆ ಹೊಂದಿರಬೇಕು. ಸದಾ ಪ್ರಯತ್ನವಾದಿಯಾಗಿರಬೇಕು. ಸತತ ಪ್ರಯತ್ನ ಯಶಸ್ವಿಗೆ ಸಹಕಾರಿಯಾಗಿದೆ. ಜೀವನದಲ್ಲಿ ಸಾಧನೆ ಮಾಡಲು ಮಾನಸಿಕ ದೃಢತೆ ಹೊಂದಬೇಕು. ಮಾನಸಿಕವಾಗಿ ಸದೃಢತೆಯಿಂದ ಸಾಧನೆಯ ಶಿಖರವನ್ನೇರಬಹುದಾಗಿದೆ ಎಂದು ಅವರು ಹೇಳಿದರು.

      ವಿಶೇಷ ಚೇತನರು ಎಲ್ಲ ಕ್ಷೇತ್ರಗಳಲ್ಲಿದ್ದಾರೆ. ನಮ್ಮಲ್ಲಿನ ಕೊರತೆಗಳ ಬಗ್ಗೆ ಯೋಚಿಸದೇ ಆತ್ಮವಿಶ್ವಾಸದಿಂದ ಮುನ್ನಡೆದರೆ ಎಲ್ಲವೂ ಸಾಧ್ಯವಾಗುತ್ತದೆ. ತಮ್ಮ ಪ್ರತಿಭೆಗಳಿಂದ ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಸಾಧನೆಗೈಯ್ಯುವಂತೆ ಅವರು ಸಲಹೆ ನೀಡಿದರು.

      ಸಮಾಜದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರ ಜೀವನ ಸ್ಪೂರ್ತಿಯಾಗಿಟ್ಟುಕೊಂಡು ಸಾಧನೆಗೆ ಮುಂದಾಗಬೇಕು. ವಿಶೇಷಚೇತನರಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಡಳಿತವೂ ಸಹ ಸದಾ ವಿಶೇಷ ಚೇತನರ ಕುಂದು ಕೊರತೆಗಳಿಗೆ ಸ್ಪಂದಿಸುತ್ತದೆ. ಶಿಸ್ತುಬದ್ಧ ಜೀವನ ನಡೆಸುವ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.

       

      ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಮಾತನಾಡಿ, ವಿಶೇಷ ಚೇತನರಿಗಾಗಿಯೇ ಇರುವ ಸರ್ಕಾರದ ಸೌಲಭ್ಯಗಳನ್ನು-
      ಯೋಜನೆಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
      ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಸವಿತಾ ಕಾಳೆ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಅವರು, ವಿಶ್ವಸಂಸ್ಥೆಯ ನಿರ್ದೇಶನದಂತೆ ಪ್ರತಿವರ್ಷ ಡಿಸೆಂಬರ್-3 ರಂದು ವಿಶ್ವ ವಿಕಲಚೇತನರ ದಿನಾಚರಣೆ ಆಚರಿಸಲಾಗುತ್ತಿದೆ. 1998 ರಿಂದ ಸುಮಾರು 23 ವರ್ಷಗಳಿಂದ ಆಚರಿಸಲಾಗುತ್ತಿದ್ದು, ಈ ವರ್ಷ ವಿಶ್ವ ಸಂಸ್ಥೆಯು ವಿಕಲಚೇತನರಿಗಾಗಿ ಘೋಷವಾಕ್ಯ “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವ ಉತ್ತೇಜನ ಎಂದು ಘೋಷಿಸಲಾಗಿದೆ. ವಿಕಲಚೇತನರ ಸಮಗ್ರ ಶ್ರೇಯೋಭಿವೃದ್ದಿಗಾಗಿ ಸರ್ಕಾರದಿಂದ ಅನೇಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದು ಅವರು ಹೇಳಿದರು.
      ಜಿಲ್ಲೆಯಲ್ಲಿ 45,353 ಜನ ವಿಕಲಚೇತನರಿದ್ದು, ಈ ಪೈಕಿ 33,251 ಜನರಿಗೆ ಯುಡಿಐಡಿ ಕಾರ್ಡಗಳನ್ನು ವಿತರಿಸಲಾಗಿದೆ. ಯುಡಿಐಡಿ ಕಾರ್ಡ ಪಡೆದ ಎಲ್ಲ ವಿಕಲಚೇತನರಿಗೆ ವಿವಿಧ ಸಾಧನ-ಸಲಕರಣೆಗಳು, ವಿದ್ಯಾರ್ಥಿವೇತನ, ಇಂಧನ ಚಾಲಿತ ತ್ರಿಚಕ್ರ ವಾಹನ, ಲ್ಯಾಪ್‍ಟಾಪ್, ಬ್ರೈಲ್‍ಕಿಟ್ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಹೊಲಿಗೆಯಂತ್ರ ಸೇರಿದಂತೆ ಇನ್ನಿತರ ಸಾಧನ ಸಲಕರಣೆಗಳನ್ನು ಒದಗಿಸಲಾಗುತ್ತಿದೆ. ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳನ್ನು ಮನೆಬಾಗಿಲಿಗೆ ತಲುಪಿಸಲು ಸರ್ಕಾರ, ಜಿಲ್ಲಾಡಳಿತ, ಸ್ವಯಂ ಸೇವಾ ಸಂಸ್ಥೆಗಳು ಕಾರ್ಯೋನ್ಮುಖವಾಗಿವೆ ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ರಾಜೇಶ ಪವಾರ, ಬಂದೇನವಾಜ ಕಲ್ಲೂರ, ಮೋದಿನ ಪಾಶ, ಅಶೋಕ ವಾಲಿಕಾರ, ಶಶಿಕಲಾ ಸೋನಾರ, ಸುಮೀತ ಪಾಂಡಿಚೇರಿ, ಸಂಜೀವ ಭವನಸಿಂಗ್ ಹಜೇರಿ, ಅಂಬಣ್ಣಾ ಗುನ್ನಾಪುರ ರಶ್ಮಿ ಚಿತ್ತವಾಡಗಿ, ಮೌಲಾಲಿಕ ಮಂಟೂರ ಅವರನ್ನು ಸನ್ಮಾನಿಸಲಾಯಿತು.

      ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಎಆರ್ ಡಿವೈಎಸ್‍ಪಿ ಡಿ.ವೈ.ಧನಗರ, ವಾರ್ತಾಧಿಕಾರಿ ಅಮರೇಶ ದೊಡಮನಿ, ನಿಮಿಷ ಆಚಾರ್ಯ, ವಿನೋದ ಖೇಡ, ರಶ್ಮಿ ಚಿತ್ತವಾಡಗಿ, ಉಪಾಧ್ಯಾಯ, ಫಾದರ್ ಟಿಯೋಲ್ ಮಚಾದೋ ಸೇರಿದಂತೆ ಜಿಲ್ಲೆಯ ಎಲ್ಲ ಎಂಆರ್‍ಡಬ್ಲೂ, ವಿಆರ್‍ಡಬ್ಲೂ, ಯುಆರ್‍ಡಬ್ಲೂ ಒಕ್ಕೂಟ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳು ಉಪಸ್ಥಿತರಿದ್ದರು.

       

      ಇದಕ್ಕೂ ಮೊದಲು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ನಡೆದ ಇಂಧನ ಚಾಲಿತ ತ್ರಿ-ಚಕ್ರ ವಾಹನ ಜಾಥಾ ಜರುಗಿತು.

      Tags: #Public News#Today News#Voice Of Janata Desk News#Voiceofjanata.in#World Day of Persons with Disabilities-2024 To advance with confidence and achieve success: Additional District Collector Somalinga Gennoor's call#ವಿಶ್ವ ವಿಕಲಚೇತನರ ದಿನಾಚರಣೆ-2024 ಆತ್ಮವಿಶ್ವಾಸದಿಂದ ಮುನ್ನಡೆದು ಸಾಧನೆಗೈಯ್ಯುವಂತೆ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.