ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಬಾರದು: ಇನ್ಸ್ಪೆಕ್ಟರ್ ಆನಂದ್ ಮೂರ್ತಿ
ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ
ಹನೂರು : ಮಾದಕ ವಸ್ತುಗಳ ಸೇವನೆಯಿಂದ ವಿಶೇಷವಾಗಿ ಯುವ ಪೀಳಿಗೆಗಳು ಸಮಸ್ಯೆಗೆ ಒಳಗಾಗುತ್ತಿದ್ದಾರೆ ಹಾಗೂ ಕುಟುಂಬ ಮತ್ತು ಸಮಾಜಕ್ಕೆ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗುತ್ತಿದೆ ಆದ್ದರಿಂದ ಸಮಾಜದ ಮೇಲೆ ಒಟ್ಟಾರೆ ಹಾನಿಕಾರ ಪರಿಣಾಮ ಬೀರುತ್ತಿರುವುದರಿಂದ ಈ ಸಮಸ್ಯೆಯನ್ನು ಬಗೆಹರಿಸಲು ನಶೆಮುಕ್ತ ಭಾರತ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಇನ್ಸ್ಪೆಕ್ಟರ್ ಆನಂದ್ ಮೂರ್ತಿ ತಿಳಿಸಿದರು.
ಪಟ್ಟಣದ ಆರ್ ಎಸ್ ದೊಡ್ಡಿ ಎಲ್ಲಿ ನಶೆ ಮುಕ್ತ ಭಾರತ ಅಭಿಯಾನ (NMBA) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಮಾತನಾಡಿ ಮದ್ಯಪಾನ , ಧೂಮಪಾನ ,ಡ್ರಗ್ಸ್ ಗಳನ್ನು ಕಡಿಮೆ ಮಾಡಲು ಈ ಜನ ಜಾಗೃತಿಯನ್ನು ಅಭಿಯಾನ ಕೈಗೊಳ್ಳಲಾಗಿದೆ ತಂಬಾಕು ,ಬೀಡಿ ,ಗಾಂಜಾ ಸಿಗರೇಟ್, ಸೇವನೆ ಕ್ಯಾನ್ಸರ್ ಗೆ ಕಾರಣವಾಗುತ್ತದೆ.ಇದನ್ನು ತಿಳಿದಿದ್ದರು ಸಹ ಜನರು ತಂಬಾಕು ಪದಾರ್ಥಗಳಿಗೆ ಗುಲಾಮರಾಗುತ್ತಿರುವುದು ವಿಷಾದನೀಯ ಸಂಗತಿ. ತಂಬಾಕಿನಲ್ಲಿ ಅತಿ ಹೆಚ್ಚು ವಿಷ ಪದಾರ್ಥಗಳು ಇರುತ್ತವೆ. ಈ ತಂಬಾಕು ಚಟಕ್ಕೆ ಹೆಚ್ಚು ಜನರು ಬಲಿಯಾಗುತ್ತಿದ್ದಾರೆ. ಆದ್ದರಿಂದ ಮಾದಕ ವಸ್ತುಗಳನ್ನು ಸೇವನೆ ಮಾಡುವುದನ್ನು ನಿಲ್ಲಿಸಬೇಕೆಂದು ತಿಳಿಸಿದರು.
ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ:
ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಚಾಲನೆ ವೇಳೆ ಮೊಬೈಲ್ ಬಳಕೆ ಬೇಡ, ದ್ವಿಚಕ್ರ ವಾಹನದಲ್ಲಿತ್ರೀಬಲ್ ರೈಡಿಂಗ್, ಮದ್ಯಪಾನ ಮಾಡಿ ಚಾಲನೆ, ಸೀಟ್ ಬೆಲ್ಟ್ ಧರಿಸದಿರುವುದು, ಸೈಡ್ ಮಿರರ್ ಇಲ್ಲದ ವಾಹನ, ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಅಜಾಗರೂಕತೆ ವಾಹನ ಚಾಲನೆ, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ಕಡ್ಡಾಯ ನಿಷೇಧ ಎಂದು ತಿಳಿಸಿದರು.
112 ಬಗ್ಗೆ ಮಾಹಿತಿ: ಯಾವುದೇ ತುರ್ತು ಸಂದರ್ಭದಲ್ಲಿ ಮಹಿಳೆಯರೇ ಆಗಲಿ ಅಥವಾ ಇತರ ಯಾರೇ ಆಗಲಿ ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರಾಧ ಶಾಖೆಯ ಎಸ್ ಐ ರವಿ ,ಪೊಲೀಸ್ ಪೇದೆ ಉಮೇಶ್ , ಸಾರ್ವಜನಿಕರು ಭಾಗವಹಿಸಿದ್ದರು.


















